ಹಾಲು ಉತ್ಪಾದಕರಿಗೆ ಸವಲತ್ತು ಕಲ್ಪಿಸಲು ಶ್ರಮಿಸುವೆ

KannadaprabhaNewsNetwork |  
Published : Feb 18, 2025, 12:31 AM IST
ಪೋಟೋ:17 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಗುಂಡೂರು ಗ್ರಾಮದ ಡೈರಿ ಅಧ್ಯಕ್ಷರಾಗಿ ಯಲ್ಲಾರೆಡ್ಡಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಹನುಮಪ್ಪ ಅವರನ್ನು ಎಲ್ಲಾ ನಿರ್ದೇಶಕರುಗಳು ಅಭಿನಂದಿಸಿದರು. | Kannada Prabha

ಸಾರಾಂಶ

ಕಾಂಗ್ರೆಸ್‌ ಮುಖಂಡ ತತ್ತನೂರು ಮಂಜುನಾಥ್ ಮಾತನಾಡಿ, ಶಾಸಕ ಶರತ್ ಬಚ್ಚೇಗೌಡರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಎಲ್ಲಾ ಸಹಕಾರ ಸಂಘಗಳು ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದು ಮುಂದಿನ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಹಾಲಿ ನಿರ್ದೇಶಕ ಕೆಎಂಎಫ್‌ ಮಂಜುನಾಥ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಸಕೋಟೆ

ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಗುಂಡೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಜೆ.ಸಿ.ಯಲ್ಲಾರೆಡ್ಡಿ, ಉಪಾಧ್ಯಕ್ಷರಾಗಿ ಹನುಮಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಯಲ್ಲಾರೆಡ್ಡಿ, ಹನುಮಪ್ಪ ಹೊರತುಪಡಿಸಿ ಬೇರೆ ಯಾವ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಕವಿತಾ ಅವಿರೋಧ ಆಯ್ಕೆ ಘೋಷಿಸಿದರು.

ಕಾಂಗ್ರೆಸ್‌ ಮುಖಂಡ ತತ್ತನೂರು ಮಂಜುನಾಥ್ ಮಾತನಾಡಿ, ಶಾಸಕ ಶರತ್ ಬಚ್ಚೇಗೌಡರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಎಲ್ಲಾ ಸಹಕಾರ ಸಂಘಗಳು ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದು ಮುಂದಿನ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಹಾಲಿ ನಿರ್ದೇಶಕ ಕೆಎಂಎಫ್‌ ಮಂಜುನಾಥ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಡೇರಿ ನೂತನ ಅಧ್ಯಕ್ಷ ಯಲ್ಲಾರೆಡ್ಡಿ ಮಾತನಾಡಿ, ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಎಲ್ಲಾ ಮುಖಂಡರು ಹಾಗೂ ಡೇರಿ ನಿರ್ದೇಶಕರ ಸಹಕಾರದಿಂದ ಅವಿರೋಧ ಅಧ್ಯಕ್ಷರಾಗಲು ಸಾಧ್ಯವಾಗಿದೆ. ಡೇರಿ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಹಾಲು ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನ ಅನುಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡ ಬಿ.ಎಂ.ಪ್ರಕಾಶ್, ವಿಎಸ್‌ಎಸ್‌ಎನ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಗ್ರಾಪಂ ಸದಸ್ಯ ನಾರಾಯಣಸ್ವಾಮಿ, ಮುಖಂಡರಾದ ಜೆಸಿಬಿ ನಾರಾಯಣಸ್ವಾಮಿ ಇತರರು ಅಭಿನಂದಿಸಿದರು.

ಡೇರಿ ನೂತನ ನಿರ್ದೇಶಕರಾದ ಉಮೇಶ್ ಚಂದ್ರಪ್ಪ, ಜೆ.ಆರ್ ನಾರಾಯಣಸ್ವಾಮಿ, ಸುಬ್ಬಾರೆಡ್ಡಿ, ಹರಿಕೃಷ್ಣ, ಗೋವಿಂದಮ್ಮ, ತಿಮ್ಮರಾಜಪ್ಪ, ಎಂ ನಾಗರಾಜ್, ಚಂದ್ರಕಲಾ, ಲಕ್ಷ್ಮಮ್ಮ, ಡೈರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ