ಹೊಳೆನರಸೀಪುರ: ಸದೃಢ ದೇಹ, ಉತ್ತಮ ಆರೋಗ್ಯ, ಏಕಾಗ್ರತೆಯಿಂದ ಕೂಡಿದ ಮನಸ್ಸು, ಮನೆ, ಕಚೇರಿ, ಸಮಾಜ ಹಾಗೂ ಇತರೆ ಸಂಘರ್ಷದ ಸಮಯದಲ್ಲಿ ದೃಢ ನಿರ್ಧಾರ ಕೈಗೊಳ್ಳುವ ಸಮಾನ ಮನಸ್ಥಿತಿ ಕಾಪಾಡುವಲ್ಲಿ ಕ್ರೀಡೆ ಪ್ರಮುಖವಾಗಿದೆ ಎಂದು ಬಿಇಒ ಸೋಮಲಿಂಗೇಗೌಡ ಅಭಿಪ್ರಾಯಪಟ್ಟರು.ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಸನ ಹಾಗೂ ತಾಪಂ, ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಣ ಶಿಕ್ಷಕರ ಸಮೂಹ ಸಹಯೋಗದಲ್ಲಿ ಆಯೋಜಿಸಿರುವ 2024- 25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣಯ್ಯ, ರಾಜ್ಯಮಟ್ಟದ ಕ್ರೀಡಾಪಟು ಸುನಿಲ್ ಹಾಗೂ ವಿದ್ಯಾರ್ಥಿನಿಯರಾದ ಸಿಂಚನಾ, ಐಶ್ವರ್ಯ ಹಾಗೂ ಇತರರಿಂದ ಬಿಇಒ ಸೋಮಲಿಂಗೇಗೌಡ ಕ್ರೀಡಾಜ್ಯೋತಿ ಸ್ವೀಕರಿಸಿದರು.
ತಾಪಂ ತಾಂತ್ರಿಕ ಅಧಿಕಾರಿ ಗೋಪಾಲ್, ದೈಹಿಕ ಶಿಕ್ಷಕ ಪರಿವೀಕ್ಷಕ ಮಹೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಸುಜಾತ ಅಲಿ, ತಾಲೂಕು ಪ್ರಾಥಮಿಕ ಶಾ.ಶಿ.ಸಂ. ನಿರ್ದೇಶಕಿ ಚಂದ್ರಕಲಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಹರೀಶ್, ಶಿಕ್ಷಕರಾದ ಪ್ರಭು, ಪುಟ್ಟರಾಜು, ಸುಮಾರಾಣಿ, ಲೋಕೇಶ್, ಮಲ್ಲಿಕಾರ್ಜುನ್ ಇತರರು ಇದ್ದರು.