ಮಾರಿಕಾಂಬಾ ಜಾತ್ರೆಯಲ್ಲಿ ರಚನಾತ್ಮಕ ಬಂದೋಬಸ್ತ್‌ ವ್ಯವಸ್ಥೆ

KannadaprabhaNewsNetwork |  
Published : Feb 24, 2026, 03:45 AM IST
ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ದೀಪನ್‌ ಎನ್.ಎಂ. ಮಾಹಿತಿ ನೀಡಿದರು. | Kannada Prabha

ಸಾರಾಂಶ

ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಪ್ರಯುಕ್ತ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ಕಲ್ಪಿಸಲು ರಚನಾತ್ಮಕವಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಎಸ್ಪಿ ದೀಪನ್ ಮಾಹಿತಿ, 25 ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಕನ್ನಡಪ್ರಭ ವಾರ್ತೆ ಶಿರಸಿ

ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಪ್ರಯುಕ್ತ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ಕಲ್ಪಿಸಲು ರಚನಾತ್ಮಕವಾದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರ ಕನ್ನಡ ಪೊಲೀಸ್ ಅಧಿಕ್ಷಕ ದೀಪನ್ ಎನ್.ಎಂ. ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಿಂದ ಬಂದೋಬಸ್ತ್‌ಗಾಗಿ 3 ಡಿವೈಎಸ್ಪಿಗಳು, 10 ಸಿಪಿಐ ಮತ್ತು ಪಿಐಗಳು, 47 ಪಿಎಸ್ಐಗಳು, 110 ಎಎಸ್ಐಗಳು, 754 ಹೆಡ್ ಕಾನ್‌ಸ್ಟೇಬಲ್‌ಗಳು ಮತ್ತು ಪಿಸಿಗಳು, ಮತ್ತು 200 ಹೋಮಗಾರ್ಡ್ಸ್‌ಗಳನ್ನು ನೇಮಕ ಮಾಡಲಾಗಿದೆ. ಒಟ್ಟು 924 ಪುರುಷ ಸಿಬ್ಬಂದಿ ಮತ್ತು 200 ಹೋಮ್‌ಗಾರ್ಡ್ಸ್, ಕೆಎಸ್‌ಆರ್‌ಪಿ 3, ಡಿಎಆರ್ 5, ಆರ್ಮ್ಡ್ ಗಾಡ್‌ 1+4 ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.

25 ನಿಗದಿತ ಸ್ಥಳದಲ್ಲಿ ಲಘು/ಬಾರಿ ವಾಹನ ಸವಾರರಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು, ಭಟ್ಕಳ, ಕುಮಟಾ, ಸಾಗರ, ಸಿದ್ದಾಪುರ ಕಡೆಯಿಂದ ಬರುವ 7 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಶಿವಮೊಗ್ಗ, ಸೊರಬ, ಶಿಕಾರಿಪುರ, ಬನವಾಸಿ ಕಡೆಯಿಂದ ಬರುವ ವಾಹನಗಳಿಗೆ 5 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಹಾವೇರಿ, ಹಾನಗಲ್, ಹುಬ್ಬಳ್ಳಿ, ಯಲ್ಲಾಪುರ, ಮುಂಡಗೋಡ ಕಡೆಯಿಂದ ಬರುವ ವಾಹನಗಳಿಗೆ 13 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಾತ್ರೆಗೆ ಬರುವ ಭಕ್ತಾದಿಗಳಿಗೆ ಜಾತ್ರೆಯ ಮಾಹಿತಿ ಹಾಗೂ ರಸ್ತೆ ಸಂಚಾರ ಮತ್ತು ವಾಹನ ನಿಲುಗಡೆ ಪ್ರದೇಶಗಳ ಬಗ್ಗೆ ಸವಿಸ್ತಾರ ಮಾಹಿತಿಯೊಂದಿಗೆ www.sirsipolice.in ಎಂಬ ವೆಬ್‌ಸೈಟ್‌ನ್ನು ತಯಾರಿಸಲಾಗಿದೆ. ಈ ವೆಬ್ ಸೈಟ್‌ನಲ್ಲಿ ಜಾತ್ರೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ಲಭ್ಯವಿರುತ್ತವೆ. ವಾಹನ ನಿಲುಗಡೆ ಲಭ್ಯವಿರುವ ಸ್ಥಾನಗಳ ಬಗ್ಗೆ ವಾಸ್ತವಿಕ ಮಾಹಿತಿ (Real-time Information) ನೀಡಲಾಗಿದೆ. ಅಲ್ಲದೇ ಪಾರ್ಕಿಂಗ್‌ ಸ್ಥಳದಲ್ಲಿ ಮೊಬೈಲ್ ಟಾಲೈಟ್‌, ಕುಡಿಯುವ ನೀರು ಮತ್ತು ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಜನ ಸಂದಣಿ ಪ್ರದೇಶಗಳಲ್ಲಿ ಪೊಲೀಸ್‌ ವಾಚ್ ಟಾವರ್‌ ನಿರ್ಮಿಸಲಾಗಿದೆ. ಜನರ ಚಲನ ವಲನಗಳ ಕುರಿತು ನಿಗಾ ಇರಿಸಲಾಗುವುದು. ಅಲ್ಲದೇ ಜಾತ್ರಾ ಪೇಟೆಯಲ್ಲಿ ಜನಸಂದಣಿ ನಿಯಂತ್ರಣಗಾಗಿ ವಿಶೇಷ ಪುರುಷ ಕಮಾಂಡೋ ಪಡೆ ಮತ್ತು ಕ್ಷೇತ್ರ ಕಾರ್ಯಾಚರಣೆ ತಂಡ ರಚಿಸಲಾಗಿದೆ ಎಂದು ಹೇಳಿದರು.

ಕಾಣಿಯಾದ ಮತ್ತು ಪತ್ತೆಯಾದ ಮಕ್ಕಳ ಮತ್ತು ಹಿರಿಯ ನಾಗರಿಕರ ಸಹಾಯಕ್ಕಾಗಿ 5 ವಿಶೇಷ ಸಹಾಯ ಕೇಂದ್ರ ತೆರೆಯಲಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್‌ ತೆರೆಯಲಾಗಿದ್ದು, 100ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ದೇವಿಯ ರಥೋತ್ಸವ ಮತ್ತು ವಿರ್ಸಜನಾ ಮೇರವಣಿಗೆ ಸಮಯದಲ್ಲಿ ನಿಗಾ ವಹಿಸಲು ಮಾರ್ಗದ ಉದ್ದಕ್ಕೂ ವಿಶೇಷ ಡ್ರೋನ್‌ ಕ್ಯಾಮೆರಾ ತಂಡ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಡಿವೈಎಸ್ಪಿ ‌ಗೀತಾ ಪಾಟೀಲ್, ಸಿಪಿಐ ‌ಶಶಿಕಾಂತ ವರ್ಮಾ, ಪಿಎಸ್ಐಗಳಾದ ನಾಗಪ್ಪ ಬಿ., ಬಸವರಾಜ ಕನಶೆಟ್ಟಿ, ಸಂತೋಷ ಕುಮಾರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೊಂದಲಗಳಿಗೆ ಶೀಘ್ರ ತೆರೆ: ಸತೀಶ್ ಜಾರಕಿಹೊಳಿ
ಪೌಷ್ಟಿಕ ಆಹಾರ ಸೇವಿಸಿ ಸದೃಢರಾಗಿ: ಡಾ. ಪ್ರಕಾಶ ಸಂಕನೂರ