ಕನ್ನಡಪ್ರಭ ವಾರ್ತೆ ಚಳ್ಳಕೆರೆ
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 5 ಜಿಲ್ಲೆ, 36 ತಾಲೂಕು, 34 ವಿಧಾನಸಭಾ ಕ್ಷೇತ್ರದಲ್ಲಿ 26ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಶಾಸಕರಿದ್ದಾರೆ. ಅವರ ಮಾರ್ಗದರ್ಶನ ಮತ್ತು ಆಶೀರ್ವಾದದಿಂದ ಈ ಬಾರಿ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಖಚಿತ.
ಕಳೆದ ಅವಧಿಯಲ್ಲಿ ಪದವೀಧರ ಕ್ಷೇತ್ರದಿಂದ ಆಯ್ಕೆಗೊಂಡವರು ಏನು ಮಾಡಿದ್ದಾರೆ, ಅವರು ಸರ್ಕಾರಿ ನೌಕರರಿಗೆ ನೀಡಿದ ಭರವಸೆ ಎಷ್ಟು ಈಡೇರಿವೆ, ಸುಳ್ಳು ಆಶ್ವಾಸನೆ ನೀಡಿ ವಂಚಿಸಿದ್ದಾರೆ. ಈ ಬಾರಿ ಈ ತಪ್ಪುಮಾಡದೆ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಮತ ನೀಡಿ. ನಿಮ್ಮ ಎಲ್ಲಾ ಸಮಸ್ಯೆಗೂ ಜತೆಯಾಗಿ ನಿಲ್ಲುವೆ ಎಂದರು.ಎನ್ಎಸ್ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, ಪ್ರಸ್ತುತ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷರಾಗಿಯೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಯುವ ನಾಯಕನಾಗಿ ಪಕ್ಷ ಸಂಘಟನೆ, ಹೋರಾಟ, ನಾಯಕತ್ವ ಗುಣವನ್ನು ಪರಿಗಣಿಸಿ ಪಕ್ಷ ಟಿಕೆಟ್ ನೀಡಿದೆ. ಕಳೆದ ಒಂದು ವರ್ಷಗಳ ಹಿಂದೆಯೇ ನಮ್ಮ ರಾಷ್ಟ್ರೀಯ ನಾಯಕ ರಾಹುಗಾಂಧಿ ಯುವ ಪಡೆಯನ್ನು ಕಟ್ಟುವ ಉದ್ದೇಶದಿಂದ ಪದವೀಧರ ಕ್ಷೇತ್ರಕ್ಕೆ ನನ್ನನ್ನು ಆಯ್ಕೆ ಮಾಡಿದ್ದಾರೆ. ಮುಂಬರುವ ಅಕ್ಟೋಬರ್ನಲ್ಲಿ ಚುನಾವಣೆ ನಡೆಯುವ ಸಂಭವವಿದ್ದು, ಎಲ್ಲಾ ಮತದಾರರು ಸಿದ್ದರಾಗಬೇಕು.
ನಗರದ ಸರ್ಕಾರಿ ಪ್ರಥಮ ದರ್ಜೆಕಾಲೇಜು, ಪದವಿಪೂರ್ವ ಕಾಲೇಜು, ಕುವೆಂಪು ಶಾಲೆ, ವಿಶ್ವ ಭಾರತಿಶಾಲೆ, ಜಯಣ್ಣ ಬಿಇಡಿ ಕಾಲೇಜು, ಸ್ವಾಮಿವಿವೇಕನಂದ ಶಾಲೆ, ವಾರಿಯರ್ಸ್, ಆದರ್ಶ ಮುಂತಾದ ಶಾಲಾ,ಕಾಲೇಜಿಗೆ ಭೇಟಿ ನೀಡಿ ಮತಯಾಚಿಸಿದರು.