ಗದಗ: ಜಿಲ್ಲೆಯಲ್ಲಿ ಬಹುತೇಕ ವಾಲ್ಮೀಕಿ ಸಮುದಾಯದ ಜನರು ಇದ್ದಾರೆ. ನಗರದ್ಯಂತ ಹಲವು ಮಹನೀಯರ ವೃತ್ತಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದು ಸ್ವಾಗತಾರ್ಹ. ಆದರೆ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣ ಆಗದಿರುವುದು ಬೇಸರದ ಸಂಗತಿಯಾಗಿದೆ. 2025ರ ವಾಲ್ಮೀಕಿ ಜಯಂತಿಯ ಒಳಗಾಗಿ ವಾಲ್ಮೀಕಿ ಸರ್ಕಲ್ ನಿರ್ಮಾಣವಾಗದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಡಾ. ತುಳಸಿರಾಮ ಹೇಳಿದರು.
ಆರಂಭದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು. ನಂತರ ರಾಜೇಶ್ವರಿ ಕಲಾ ಕುಟೀರ ತಂಡದ ಮೇಘನಾ ಆರ್. ವಾಲ್ಮೀಕಿ ಅವರಿಂದ ಭರತನಾಟ್ಯ ಪ್ರದರ್ಶನ ಜರುಗಿತು.
ಈ ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಯು ವಾಲ್ಮೀಕಿ ಸರ್ಕಲ್ ನಿಂದ ಬನ್ನಿಕಟ್ಟ ಪಂಚರಹೊಂಡ, ಬಸವೇಶ್ವರ ಸರ್ಕಲ್, ಟಾಂಗಾಕೂಟ ಮಹೇಂದ್ರಕರ್ ಸರ್ಕಲ್ ಹಾಗೂ ಡಿಸಿ ಮಿಲ್ ಮಾರ್ಗವಾಗಿ ಗಂಗಾಪುರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಸಂಪನ್ನಗೊಂಡಿತ್ತು.ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಅನಿಲಕುಮಾರ ಸಿದ್ದಮ್ಮನಹಳ್ಳಿ, ವಿಪ ಸದಸ್ಯ ಎಸ್.ವಿ. ಸಂಕನೂರ. ಮಹೇಶ ಪೋತದಾರ, ದೇವೇಂದ್ರಪ್ಪ ತಳವಾರ, ಶಕುಂತಲಾ ನಾಯಕ, ವೀರೇಶ ವಾಲ್ಮೀಕಿ, ನಾಗರಾಜ ತಳವಾರ, ಲಕ್ಷ್ಮಿಅನಿಲಕುಮಾರ ಸಿದ್ದಮ್ಮನಹಳ್ಳಿ, ಎಸ್.ಎನ್. ಬಳ್ಳಾರಿ, ವಸಂತಕುಮಾರ ಸಿದ್ದಮ್ಮನಹಳ್ಳಿ, ಗೊವೀಂದರಾಜ ಪನ್ನೂರ, ಅರುಣ ಬೆಳದಡಿ, ಶಿವಾನಂದ ತಳವಾರ, ವಸಂತ ವಾಲ್ಮೀಕಿ, ಅನಿಲ ಪೂಜಾರ, ಶ್ರೀಕಾಂತ ಪೂಜಾರ, ವಿಜಯ ಕುರಗೋಡ, ದತ್ತು ಬೆಳದಡಿ, ಕಿರಣ ನಾಯ್ಕರ, ಮಾರುತಿ ಕಾತರಕಿ, ಈಶ್ವರ ರೌಡೂರು, ರಮೇಶ ಹೊಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿಕ್ಷಕ ಬಾಹುಬಲಿ ಜೈನರ್ ನಿರೂಪಿಸಿದರು.