ಕನ್ನಡಪ್ರಭ ವಾರ್ತೆ ಗುಬ್ಬಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ವಿರೋಧಿಸಿ 25 ರಂದು ಜಿಲ್ಲಾ ಬಂದ್ಗೆ ಕರೆ ನೀಡಲಾಗಿದೆ. ಬಂದ್ನಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜಕೀಯ ಪಕ್ಷಗಳ ಮುಖಂಡರು, ವರ್ತಕರ ಸಂಘ, ದಲಿತಪರ ಸಂಘಟನೆಗಳು ಕನ್ನಡಪರ ಸಂಘಟನೆಗಳು ವಿದ್ಯಾರ್ಥಿಗಳು ಭಾಗವಹಿಸಬೇಕು ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕಾಮಗಾರಿಯನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಜೆಡಿಎಸ್ ಮುಖಂಡ ಬಿ .ಎಸ್. ನಾಗರಾಜು ಮಾತನಾಡಿ, ಕ್ಷೇತ್ರದ ಶಾಸಕರು ಬೀದಿಗಳಿದು ರೈತರ ಪರವಾಗಿ ಹೋರಾಟ ಮಾಡಬೇಕು. ತಾಲೂಕಿನ ರೈತರು ಅವರಿಗೆ ಮತವನ್ನು ಹಾಕಿದ್ದಾರೆ. ಅವರ ಹಿತ ಕಾಪಾಡುವುದು ಅವರ ಜೊತೆಗೆ ನಮ್ಮೆಲ್ಲರ ಕರ್ತವ್ಯವಾಗಿದೆ. ಇಲ್ಲದೆ ಹೋದರೆ ರೈತರು ರಾಜಕೀಯ ಜೀವನವನ್ನೇ ಮುಗಿಸುತ್ತಾರೆ ಎಂಬುದು ನೆನೆಪಿರಲಿ. ಹೇಮಾವತಿ ನೀರು ಜಿಲ್ಲೆಯ ಜನರ ಜೀವನಾಡಿಯಾಗಿದೆ ಎಂದು ಹೇಳಿದರು.ತಾಲೂಕಿಗೆ ಹೇಮಾವತಿ ಹರಿಯುತ್ತಿರುವುದರಿಂದ ಜನರು ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದಾರೆ. ಹೇಮಾವತಿ ನೀರನ್ನು ಬೇರೆಡೆಗೆ ಹರಿಯಲು ಬಿಟ್ಟರೆ ಇಲ್ಲಿನ ರೈತರು ಸಮಸ್ಯೆಗೆ ಸಿಲುಕುತ್ತಾರೆ. ಆದ್ದರಿಂದ ಜೂನ್ 25ರಂದು ನಡೆಯುವ ಗುಬ್ಬಿ ತಾಲೂಕು ಬಂದ್ ನಲ್ಲಿ ರೈತರು ವಿವಿಧ ಸಂಘ ಸಂಸ್ಥೆಗಳ ಭಾಗವಹಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕೆಂದು ಮನವಿ ಮಾಡಿದರು.
ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ತುಮಕೂರು ಜಿಲ್ಲೆಯ ರೈತರನ್ನು ಬಲಿ ಕೊಡುತ್ತಿದ್ದಾರೆ. ಈ ಯೋಜನೆ ತುಮಕೂರು ಜಿಲ್ಲೆಯ ರೈತರಿಗೆ ಮರಣ ಶಾಸನವಾಗಿದೆ. ಈ ಹೋರಾಟ ಎಲ್ಲಿಗೆ ಮುಗಿಯುವುದಿಲ್ಲ. ಸರ್ಕಾರ ಈ ಯೋಜನೆಯನ್ನು ಹಿಂಪಡೆಯುವವರೆಗೂ ಈ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ತಾಲೂಕು ರೈತ ಸಂಘದ ವೆಂಕಟೇಗೌಡ ಮಾತನಾಡಿ, ರೈತರು ದೆಹಲಿಯಲ್ಲಿ ಹೋರಾಟ ಮಾಡಿದಂತೆ ಇಲ್ಲಿಯೂ ಕೂಡ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟವನ್ನು ತೀವ್ರಗೊಳಿಸಬೇಕು. ಬಂದ್ನ ಬಿಸಿಯನ್ನು ಸರ್ಕಾರಕ್ಕೆ ಮುಟ್ಟಿಸಬೇಕು ಎಂದರು.
ಜೆಡಿಎಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ, ಪ್ರತಿಯೊಬ್ಬರ ಸಹಕಾರದಿಂದ ಈ ಒಂದು ಪ್ರತಿಭಟನೆ ನಡೆಯಬೇಕಾಗಿದ್ದು ನಾವೆಲ್ಲರೂ ಒಟ್ಟಾಗಿ ಸೇರಿ ಪ್ರತಿಭಟನೆ ಮಾಡೋಣ ಎಂದು ತಿಳಿಸಿದರು.