ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ:ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಸಿಗಬೇಕು. ಆ ಕುಟುಂಬಕ್ಕೆ ಕಾಲೇಜಿನಿಂದ ಪರಿಹಾರ ಕೊಡಬೇಕು. ಸೋಮವಾರ ಕಾಲೇಜಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಬೇಕು. ಈ ಬೇಡಿಕೆಗೆ ಸ್ಪಂದಿಸದಿದ್ದರೆ ಗುಳೇದಗುಡ್ಡ ಬಂದ್ ಮಾಡಿ, ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಸಿಗುವವರೆಗೂ ಎಬಿವಿಪಿ ರಾಜ್ಯಾದ್ಯಂತ ಹೋರಾಟ ಮಾಡುತ್ತದೆ ಎಂದು ಎಬಿವಿಪಿ ಪ್ರಾಂತ ಸಂಚಾಲಕ ಪ್ರಥಮೇಶ ವಾಘಮೋಡೆ ಹೇಳಿದ್ದಾರೆ.
ತಪ್ಪಿತಸ್ತರ ವಿರುದ್ಧ ಶಿಸ್ತುಕ್ರಮ: ಸಾವಿಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಲಾಗುವುದು, ಇನ್ಮುಂದೆ ಕಾಲೇಜಿನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಿಸ್ತು ಕ್ರಮಕ್ಕೆ ಮುಂದಾಗುತ್ತೇವೆ. ಸೋಮವಾರ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆ ಮಾಡುತ್ತೇವೆ ಎಂದು ಆಡಳಿತ ಮಂಡಳಿ ಪಿಇ ಟ್ರಸ್ಟಿನ ಗೌರವ ಕಾರ್ಯದರ್ಶಿ ರವೀಂದ್ರ ಪಟ್ಟಣಶೆಟ್ಟಿ ಮಾಧ್ಯಮಕ್ಕೆ ತಿಳಿಸಿದ್ದಾರೆ.ನಮ್ಮ ಮಗಳು ಯಾವ ಉಸಾಬರಿಗೆ ಹೋದವಳಲ್ಲ. ಕಾಲೇಜಿನಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದಳು. ದೊಡ್ಡ ಕನಸು ಕಂಡಿದ್ದಳು. ಸಹಪಾಠಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳು ಏನು ಮಾಡುತ್ತಾರೆ. ಯಾರು ಬಂದ್ರು, ಯಾರು ಹೋದ್ರು, ಏನಾಗುತ್ತಿದೆ ಎಂಬುದರ ಬಗ್ಗೆ ಕಾಲೇಜಿನವರು ಗಮನ ಹರಿಸಬೇಕು. ಆದರೆ ಇದ್ಯಾವುದನ್ನು ಕಾಲೇಜಿನವರು ಮಾಡಿಲ್ಲ. ಅವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳು ಯಾರು ಎಂಬುವುದೇ ಪ್ರಾಚಾರ್ಯರಿಗೆ ಸರಿಯಾದ ಮಾಹಿತಿ ಇಲ್ಲ. ನನ್ನ ಮಗಳಿಗೆ ತೊಂದರೆ ಕೊಟ್ಟವರಿಗೆ ಶಿಕ್ಷೆಯಾಗಲೇಬೇಕು.
-ರಾಜೇಶ್ವರಿ ಮುಂಡಾಸದ ತಾಯಿ, ಮಲ್ಲಮ್ಮ ಚಿಕ್ಕಮ್ಮ