ಕಬ್ಬಾಳು ಬೆಟ್ಟದ ಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

KannadaprabhaNewsNetwork |  
Published : Mar 22, 2025, 02:00 AM IST
ಕೆ ಕೆ ಪಿ ಸುದ್ದಿ 06: ಕಬ್ಬಾಳು ಬೆಟ್ಟದ ಕೊಳದಲ್ಲಿ ಮೃತ ದೇಹ ಮೇಲೆತ್ತಲು ಪೊಲೀಸರು ಮತ್ತು ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿರುವುದು | Kannada Prabha

ಸಾರಾಂಶ

ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕನಕಪುರ: ಸ್ನಾನ ಮಾಡಲು ಹೋಗಿ ಯುವಕ ನೀರು ಪಾಲಾಗಿರುವ ಘಟನೆ ಕಬ್ಬಾಳು ಬೆಟ್ಟದ ಕೊಳದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೇಯಸ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ವಿದ್ಯಾರ್ಥಿ. ತಾಲೂಕಿನ ಸಾತನೂರು ಹೋಬಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಬ್ಬಾಳು ಕ್ಷೇತ್ರದ ಬಳಿ ಇರುವ ಕಬ್ಬಾಳು ಬೆಟ್ಟಕ್ಕೆ ಬೆಂಗಳೂರು ಮೂಲದ ಐವರು ವಿದ್ಯಾರ್ಥಿಗಳು ಶುಕ್ರವಾರ ತೆರಳಿದ್ದರು. ವಿದ್ಯಾರ್ಥಿಗಳು ಬೆಟ್ಟದ ಮೇಲಿರುವ ಕೊಳದಲ್ಲಿ ಸ್ನಾನ ಮಾಡಲು ಹೋದಾಗ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗುತ್ತಿದ್ದಾಗ ರಕ್ಷಣೆ ಮಾಡಲು ಹೋದ ಶ್ರೇಯಸ್ ನೀರಿನಲ್ಲಿ ಮುಳುಗಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣ ಸಾತನೂರು ಪೊಲೀಸರು, ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿ ನೀರಿನಲ್ಲಿ ಮುಳುಗಿರುವ ವಿದ್ಯಾರ್ಥಿ ಮೃತ ದೇಹ ಮೇಲೆತ್ತಲು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಮೃತ ದೇಹ ಪತ್ತೆಯಾಗಿಲ್ಲ, ಕಾರ್ಯಾಚರಣೆ ಶನಿವಾರ ಮುಂದುವರಿಯಲಿದ್ದು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ