ಕನ್ನಡಪ್ರಭ ವಾರ್ತೆ ಮಂಡ್ಯ
ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಅಜಿತ್ ಪಿ.ಗೌಡ ಮತ್ತು ಹಿತಶ್ರೀ ಪ್ರಸಾದ್ ಜಪಾನ್ ದೇಶಕ್ಕೆ ತೆರಳಲು ಆಯ್ಕೆಯಾಗಿರುವ ವಿದ್ಯಾರ್ಥಿಗಳಾಗಿದ್ದಾರೆ. ಜಪಾನ್ನ ಹ್ಯೂಗೊ ಇಂಟರ್ನ್ಯಾಷನಲ್ ಅಸೋಸಿಯೇಷನ್ನವರು ಪ್ರತಿ ವರ್ಷ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕಳೆದ ಸಾಲಿನಲ್ಲಿ ಏಳನೇ ತರಗತಿಯ ವಿದ್ಯಾರ್ಥಿ ಶಾನ್ ಸ್ಟೀವನ್ ಡಾಲ್ಮೇಡಾ ಮತ್ತು ಎಂಟನೇ ತರಗತಿಯ ಧನ್ಯ ಜೆ.ಗೌಡ ಅವರು ಆಯ್ಕೆಯಾಗಿದ್ದರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೊದಲ ಹಂತದಲ್ಲಿ ನಡೆದ ಪರೀಕ್ಷೆಗೆ ಶಾಲೆಯ 78 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎರಡನೇ ಹಂತದ ಪ್ರಾಯೋಗಿಕ ಪರೀಕ್ಷೆಗೆ 12 ವಿದ್ಯಾರ್ಥಿಗಳು ಆಯ್ಕೆಯಾಗಿ ಅಂತಿಮವಾಗಿ ನಡೆದ ಓರಲ್ ಪರೀಕ್ಷೆಯಲ್ಲಿ ಆರು ವಿದ್ಯಾರ್ಥಿಗಳಲ್ಲಿ ಇಬ್ಬರು ಆಯ್ಕೆಯಾಗಿದ್ದಾರೆ ಎಂದು ವಿವರಿಸಿದರು.ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು ಎಂದರು.
ಜಪಾನ್ ದೇಶದಿಂದ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ. ಅಲ್ಲಿ ಪಠ್ಯ ವಿಷಯಗಳಿಗಿಂತಲೂ ವಾಸ್ತವ ವಿಷಯಗಳಿಗೆ ಹೆಚ್ಚಿನ ಒತ್ತು ನೀಡುತ್ತಾರೆ. ಅಲ್ಲಿನ ಮಕ್ಕಳಿಗೆ ಇಲ್ಲಿನ ಭಾಷೆ, ಶಿಕ್ಷಣ, ಸಂಸ್ಕೃತಿಯನ್ನು ನಮ್ಮ ವಿದ್ಯಾರ್ಥಿಗಳು ಪರಿಚಯಿಸಿಕೊಡಲಿದ್ದಾರೆ ಎಂದು ನುಡಿದರು.
ಗೋಷ್ಠಿಯಲ್ಲಿ ಜಪಾನ್ಗೆ ತೆರಳಲಿರುವ ಅಜಿತ್ ಪಿ.ಗೌಡ ಮತ್ತು ಹಿತೈಷಿ ಪ್ರಸಾದ್ ಇದ್ದರು.