ಗೆಳತಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ನೇಣಿಗೆ ಶರಣು

KannadaprabhaNewsNetwork |  
Published : Sep 08, 2025, 01:00 AM IST
ಸಿಕೆಬಿ-8 ಶಬ್ಬೀರ್ | Kannada Prabha

ಸಾರಾಂಶ

ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆ ಹುಡುಗಿ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ನಿರ್ಬಂಧಿಸಿ (ಬ್ಲಾಕ್ ಮಾಡಿ) ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಶಬ್ಬೀರ್ ಮನನೊಂದಿದ್ದ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಪೆರೇಸಂದ್ರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಪ್ರೇಯಸಿ ಮೊಬೈಲ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಪೆರೇಸಂದ್ರ ಕ್ರಾಸ್ ನ ಶಾಂತ ಗ್ರೂಫ್ ಆಪ್ ಇನ್ಸ್ಟಿಟ್ಯೂಟ್ ನ ಹಾಸ್ಟೆಲ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಎಂದು ಗುರುತಿಸಲಾಗಿದೆ.

ಶಾಂತ ಗ್ರೂಫ್ ಆಪ್ ಇನ್ಸ್ಟಿಟ್ಯೂಟ್ ಕಾಲೇಜಿನ ಅಲೈಡ್ ಸೈನ್ಸ್ ಕೋರ್ಸ್‌ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಮೊಹಮ್ಮದ್ ಶಬ್ಬೀರ್, ಭಾನುವಾರ ಬೆಳಗ್ಗೆ ತನ್ನ ಹಾಸ್ಟೆಲ್ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ರೂಮಿನ ಕಿಟಕಿಗೆ ಪಂಚೆಯನ್ನು ಕಟ್ಟಿ, ಅದರಿಂದ ಕತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಪೆರೇಸಂದ್ರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದಾಗ, ಶಬ್ಬೀರ್‌ನ ಕೋಣೆಯಲ್ಲಿ ಡೆತ್‌ನೋಟ್ ಲಭ್ಯವಾಗಿದೆ.

ಮೃತ ವಿದ್ಯಾರ್ಥಿ ಬರೆದ ಡೆತ್‌ ನೋಟ್‌ನಲ್ಲಿ, ‘ಐ ಡಿಡ್ ನಾಟ್ ಸ್ಟಾಪ್ ಎನಿಥಿಂಗ್ ಅನ್ ಟಿಲ್, ಐ ಆಲ್ ವೇಸ್ ಲವ್ ಫಾರ್ ಎವೆರ್, ಅತಿಥಿ ಯೂ ಆರ್ ಮೈ ಫಸ್ಟ್ ಆ್ಯಂಡ್ ಯೂ ಆರ್ ಮೈ ಲಾಸ್ಟ್ ’ ಎಂದು ಬರೆಯಲಾಗಿದೆ.

ಪೊಲೀಸರು ಈ ಡೆತ್ ನೋಟ್ ವಶಪಡಿಸಿಕೊಂಡಿದ್ದಾರೆ.

ಮೃತ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆ ಹುಡುಗಿ ಕಳೆದ ಕೆಲವು ದಿನಗಳಿಂದ ಶಬ್ಬೀರ್‌ನ ದೂರವಾಣಿ ಸಂಖ್ಯೆಯನ್ನು ನಿರ್ಬಂಧಿಸಿ (ಬ್ಲಾಕ್ ಮಾಡಿ) ಸರಿಯಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಶಬ್ಬೀರ್ ಮನನೊಂದಿದ್ದ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಪೆರೇಸಂದ್ರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ