ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣ (ಎಸ್ಜೆಎಂ ಕ್ಯಾಂಪಸ್)ನಲ್ಲಿ ಶುಕ್ರವಾರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವದ ನಿಮಿತ್ತ ಅವರ ಹೆಸರಿನಲ್ಲಿ ಅಂದಾಜು 13 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 126 ಕೊಠಡಿಗಳುಳ್ಳ 4 ಅಂತಸ್ತಿನ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆಎಂ ವಿದ್ಯಾಪೀಠ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ , ಸದಸ್ಯರಾದ ಡಾ.ಪಿ.ಎಸ್ ಶಂಕರ್ ಗುದ್ದಲಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಮಹಾಸ್ವಾಮಿಗಳು, ಎಸ್.ಎನ್ ಚಂದ್ರಶೇಖರ್, ಮೋಕ್ಷಪತಿ ಮಹಾಸ್ವಾಮಿಗಳು, ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಗುರುಮಠಕಲ್ನ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ್, ನಾಗೇಂದ್ರಗೌಡ, ನಾಗರಾಜ್, ಡಾ.ಕೊಟ್ರೇಶ್ ಮತ್ತು ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.