ಪಾಕ್‌ ಪರ ಕಾಳಜಿ ತೋರಿ ವಿದ್ಯಾರ್ಥಿನಿ ಪೋಸ್ಟ್‌

KannadaprabhaNewsNetwork |  
Published : May 10, 2025, 01:03 AM IST
ಪಾಕ್‌ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪಹಲ್ಗಾಮ್‌ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿರುವ ಸಿಂದೂರದ ಪ್ರತೀಕಾರಕ್ಕೆ ಪಾಕಿಸ್ತಾನ್‌ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪೋಸ್ಟ್ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಈ ಕುರಿತು ಪೊಲೀಸರು ಕೂಡ ತಕ್ಷಣವೇ ವಿದ್ಯಾರ್ಥಿನಿ ವಿರುದ್ಧ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ.@hoodyyyyyyy ಹೆಸರಿನ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಎಂಬಾಕೆ ಈ ಪೋಸ್ಟ್ ಹಾಕಿದ್ದಾಳೆ

ಕನ್ನಡಪ್ರಭ ವಾರ್ತೆ ವಿಜಯಪುರ

ಪಹಲ್ಗಾಮ್‌ ಹಿನ್ನೆಲೆಯಲ್ಲಿ ಭಾರತೀಯ ಸೇನೆ ನಡೆಸಿರುವ ಸಿಂದೂರದ ಪ್ರತೀಕಾರಕ್ಕೆ ಪಾಕಿಸ್ತಾನ್‌ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಪೋಸ್ಟ್ ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಈ ಕುರಿತು ಪೊಲೀಸರು ಕೂಡ ತಕ್ಷಣವೇ ವಿದ್ಯಾರ್ಥಿನಿ ವಿರುದ್ಧ ಪೊಲೀಸರು ಕೂಡ ಪ್ರಕರಣ ದಾಖಲಿಸಿದ್ದಾರೆ.@hoodyyyyyyy ಹೆಸರಿನ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ಅಲ್ ಅಮೀನ್ ಮೆಡಿಕಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ಎಂಬಾಕೆ ಈ ಪೋಸ್ಟ್ ಹಾಕಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿಯೂ ಭಾರತೀಯ ಸೇನಾ ಕಾರ್ಯಾಚರಣೆ ಹಾಗೂ ಪಾಕಿಸ್ತಾನಿಗಳ ಸುರಕ್ಷಿತ ಬಗ್ಗೆ ಕಾಳಜಿ ತೋರಿ ಪೋಸ್ಟ್ ಹಾಕಿರೋ ತಷಾವುದ್ದ ಫಾರೂಖಿ ಶೇಖ್, ಪಾಕಿಸ್ತಾನಿಗಳ ಪರವಾಗಿದ್ದಾಳೆ ಎಂಬಂತೆ ತೋರಿಸಿದ್ದಾಳೆ. ತನ್ನ ಖಾತೆಯಲ್ಲಿ To my Pakistani Friends, people of IOJK, AJK, Avoid going to near military Govt Installation. If you are leaving close to 200 KM border Radius please move inland. May Allah Protect us all from India Ameen#sos ಎಂದು ಪಾಕಿಸ್ತಾನ ದ್ವಜದ ಭಾವಚಿತ್ರ ಹಾಕಿ ಪೋಸ್ಟ್ ಮಾಡಿದ್ದಾಳೆ.

ಪಾಕಿಸ್ತಾನ ಹಾಗೂ ಇತರರಿಗೆ ದೇವರು ರಕ್ಷಣೆ ಮಾಡಲಿ ಎಂದು ದೇಶ ವಿರೋಧಿ ಪೋಸ್ಟ್ ಹಾಕಿರುವ ವಿದ್ಯಾರ್ಥಿನಿ, ಗಡಿಯ ಕಡೆಗೆ ಹೋಗಬೇಡಿ, ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ ಎಂದು ಪೋಸ್ಟ್ ಹಾಕಿ ಪಾಕಿಸ್ತಾನ ಜನರ ಪರ ಪ್ರೇಮ ಮೆರೆದಿದ್ದಾಳೆ. ಪೋಸ್ಟ್‌ ಹಾಕಿರುವ ವಿದ್ಯಾರ್ಥಿನಿಯ ವಿರುದ್ಧ ಕಾನೂನು ಕ್ರಮಕ್ಕೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿವೆ. ಹೀಗಾಗಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ವಿನೋದ ದೊಡಮನಿ ಸ್ವಯಂ ದೂರು ದಾಖಲು ಮಾಡಿಕೊಂಡಿದ್ದಾರೆ. ಪಾಕ್ ಪರ ಕಾಳಜಿ ತೋರಿ ಪೋಸ್ಟ್ ಹಾಕಿದ್ದಕ್ಕೆ ದೇಶದ ಸಾರ್ವಭೌಮತ್ವದ ಘನತೆಗೆ ಅಪಾಯಕಾರಿಯಾಗುವ ರೀತಿಯಲ್ಲಿ ಪೋಸ್ಟ್ ಹಾಕಿದ್ದು, ದೇಶದ ಏಕತೆಗೆ ಧಕ್ಕೆ ತಂದಂತಹ ಪೋಸ್ಟ್ ಹಾಕಿದ ಕಾರಣ ದಂತ ವೈದ್ಯಕೀಯ ವಿದ್ಯಾರ್ಥಿನಿ ತಷಾವುದ್ದ ಮೇಲೆ BNS 152. 197.3(5) ಅಡಿ ದೂರು ದಾಖಲು ಮಾಡಿಕೊಂಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಯೂ ಟರ್ನ್ ಹೊಡೆದಿರುವ ವಿದ್ಯಾರ್ಥಿನಿ ತಷಾವುದ್ದ, ನನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಕಾಮೆಂಟ್‌ಗೆ ಸಂಬಂಧಿಸಿದೆ. ಅದು ಕೆಲವರನ್ನು ನೋಯಿಸಿತು, ಮನನೊಂದಿರುವ ಎಲ್ಲರಿಗೂ ನನ್ನ ಹೃದಯದಿಂದ ಕ್ಷಮೆಯಾಚಿಸುತ್ತೇನೆ. ಹೃದಯದಿಂದ ನಿಜವಾದ ಭಾರತೀಯ ನಾನು. ನನ್ನ ರಾಷ್ಟ್ರವನ್ನು ಪ್ರೀತಿಸುತ್ತೇನೆ, ಇದು ನನ್ನ ತಾಯ್ನಾಡು. ಭಾರತದಲ್ಲಿ ಹುಟ್ಟಿ ಬೆಳೆದದ್ದು. ನಾನು ಕಮೆಂಟ್ ಮಾಡಿದ್ದು ಮೂರ್ಖತನದ ಕೃತ್ಯವಾಗಿದೆ. ಮತ್ತೊಮ್ಮೆ ನಿಜವಾಗಿಯೂ ಎಲ್ಲರಿಗೂ ಕ್ಷಮೆಯಾಚಿಸಿ, ಭವಿಷ್ಯದಲ್ಲಿ ನಾನು ಎಂದಿಗೂ ಈ ರೀತಿಯ ತಪ್ಪನ್ನು ಮಾಡುವುದಿಲ್ಲ ಎಂದು ಖಚಿತಪಡಿಸುತ್ತೇನೆ. ಜೈ ಹಿಂದ್ ಎಂದು ಪೋಸ್ಟ್ ಮಾಡಿದ್ದಾಳೆ ತಷಾವುದ್ದ. ಸದ್ಯ ತಷಾವುದ್ದ ಮುಂಬೈನಲ್ಲಿರುವ ಮಾಹಿತಿ ಪಡೆದಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''