ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ರಸ್ತೆತಡೆದು ಪ್ರತಿಭಟನೆ

KannadaprabhaNewsNetwork |  
Published : Apr 21, 2024, 02:18 AM IST
ಫೋಟೋ- 20ಜಿಬಿ4, 20ಜಿಬಿ5 , 20ಜಿಬಿ 6 ಮತ್ತು 20ಜಿಬಿ7ನೋಹಾ ಕೊಲೆ ಖಂಡಿಸಿ ಕಲಬುರಗಿಯಲ್ಲಿ ನಿವಾರ ನಾಗರಿಕ ಹಿತರಕ್ಷಣಾ ವೇದಿಕೆಯವರು ನಡೆಸಿದ ಪ್ರತಿಭಟನೆಯ ನೋಟಗಳು. ಬಿಜೆಪಿಯ ಮುಖಂಡರಾದ ಡಾ. ಉಮೇಶ ಜಾಧವ್‌, ಬಸವರಾಜ ಮತ್ತಿಮಡು, ನಾಗಲಿಂಗಯ್ಯ ಮಠಪತಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಕಲಬುರಗಿಯಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳ ಅಡಿಯಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಕಲಬುರಗಿಯಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳ ಅಡಿಯಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆಯಿತು.

ಸರ್ದಾರ್‌ ಪಟಲ್‌ ವೃತ್ತದಲ್ಲಿ ಸೇರಿದ ಯುವಕರು, ಯುವತಿಯರು, ಕಾಲೇಜು ವಿದ್ಯಾರ್ಥಿಗಳು ಎಲ್ಲರೂ ಮಾನವ ಸರಪಳಿ ರಚಿಸಿ ಘಟನೆ ಖಂಡಿಸಿದರಲ್ಲದೆ ಹಂತಕನಿಗೆ ಗಲ್ಲುಶಿಕ್ಷೆಯಾಗಲಿ ಎಂದರು. ಕಲಬುರಗಿ ನಗರದ ಈ ಮುಖ್ಯ ವೃತ್ತದಲ್ಲಿ 2 ಗಂಟೆಗೂ ಹೆಚ್ಚುಕಾಲ ಮಾನವ ಸರಪಣಿ ರಚಿಸಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಲೋಕಸಭೆ ಬಿಜೆಪಿ ಹುರಿಯಾಳು ಡಾ. ಉಮೇಶ ಜಾಧವ್‌, ಶಾಸಕ ಬಸವರಾಜ ಮತ್ತಿಮಡು ಪಾಲ್ಗೊಂಡು ನೇಹಾ ಭಾವಚಿತ್ರವಿರುವ ಪೋಸ್ಟರ್‌ ಹಿಡಿದುಕೊಂಡು ಘಟನೆ ಖಂಡಿಸಿದರು. ಹಿಂದೂ ಜಾಗರಣ ವೇದಿಕೆಯ ಪ್ರಮುಖರೂ ಪ್ರತಿಭಟನೆಯಲ್ಲಿ ಪಾಲ್ಗೊಂಡು ಘಟನೆಯನ್ನು ಉಗ್ರವಾಗಿ ಖಂಡಿಸಿದರು.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ನೇಹಾ ಫೋಟೋ ಹಿಡಿದು ಡಾ. ಜಾಧವ್‌ ಪ್ರತಿಭಟನೆ ಮಾಡಿ ಗಮನ ಸೆಳೆದರು. ಘಟನೆಗೆ ಖಂಡನೆಯ ಹೇಳಿಕೆ ನೀಡಿದ ಬಿಜೆಪಿ ಲೋಕಸಭೆ ಅಭ್ಯರ್ಥಿ ಡಾ. ಜಾಧವ್‌, ಲವ್‌ ಜಿಹಾದಜ್‌ ಪೋಷಿಸುತ್ತಿರೋ ಕಾಂಗ್ರೆಸ್‌ ಎಂದು ನೇರ ಆರೋಪ ಮಾಡಿದರು.

ವಿವಿಧ ಸಂಘಟನೆಗಳ ಸದಸ್ಯರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಟೈರ್‌ಗಳನ್ನು ಸುಟ್ಟು ಆಕರ್ರೋಶ ಹೊರಹಾಕಲಾಯ್ತು. ಇದರಿಂದಾಗಿ ಮುಖ್ಯ ರಸ್ತೆ, ವೃತ್ತಗಳ ಸಂಚಾರದಲ್ಲಿ ಭಾರಿ ಅಡಚಣೆ ಕಂಡಿತ್ತು. ಪಟೇಲ್‌ ವೃತ್ತ ಬಂದ್‌ ಆಗಿದ್ದರಿಂದ ಜಿಲ್ಲಾ ಕೋರ್ಟ್‌ ರಸ್ತೆ, ಡಿಸಿ ಕಚೇರಿ ಸುತ್ತಮುತ್ತ ಸಂಚಾರ ದಟ್ಟಣೆ ಕಾಡಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ