ವಿದ್ಯಾರ್ಥಿಯ ಶವ ಕೆರೆಯಲ್ಲಿ ಪತ್ತೆ

KannadaprabhaNewsNetwork |  
Published : Jun 14, 2025, 12:35 AM ISTUpdated : Jun 14, 2025, 12:36 AM IST
ಪೊಟೋ೧೩ಸಿಪಿಟಿ೯: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ | Kannada Prabha

ಸಾರಾಂಶ

ಶುಕ್ರವಾರ ಬೆಳಗ್ಗೆ 6 ಗಂಟೆಯ ವೇಳೆಗೆ ವಿದ್ಯಾರ್ಥಿಯ ಶವ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದ್ದು, ಶವವನ್ನು ಹೊರತೆಗೆದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.

ಚನ್ನಪಟ್ಟಣ: ಗುರುವಾರ ಸಂಜೆ ತಾಲೂಕಿನ ಸಿಂಗರಾಜಿಪುರ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದ್ದ ವಿದ್ಯಾರ್ಥಿನಿಯ ಶವ ಶುಕ್ರವಾರ ಬೆಳಗ್ಗೆ ಕೆರೆಯಲ್ಲಿ ಪತ್ತೆಯಾಗಿದೆ.ಮಂಡ್ಯ ಜಿಲ್ಲೆಯ ಮದ್ದೂರಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮಿ (18) ಶವ ಶುಕ್ರವಾರ ಕೆರೆಯಲ್ಲಿ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯ ವೇಳೆಗೆ ವಿದ್ಯಾರ್ಥಿಯ ಶವ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದ್ದು, ಶವವನ್ನು ಹೊರತೆಗೆದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.ಏನಿದು ಘಟನೆ:

ಗುರುವಾರ ಸಂಜೆ ತಾಲೂಕಿನ ಸಿಂಗರಾಜಿಪುರ ಕೆರೆಯ ಬಳಿ ವಿದ್ಯಾರ್ಥಿನಿಯೊಬ್ಬಳ ಗುರುತಿನ ಚೀಟಿ, ಮೊಬೈಲ್, ಬ್ಯಾಗ್ ಹಾಗೂ ಚಪ್ಪಲಿಗಳು ದೊರೆತ್ತಿದ್ದು, ಆಕೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಅಕ್ಕೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದರೂ ಶವ ಪತ್ತೆಯಾಗದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿಯ ರಾಮನಗರದ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಗುರುವಾರ ಎಂದಿನಂತೆ ಕಾಲೇಜಿಗೆ ತೆರಳಿದ್ದಳು, ಆದರೆ, ಮಧ್ಯಾಹ್ನ ನಿಮ್ಮ ಮಗಳು ಕಾಲೇಜಿಗೆ ಬಂದಿಲ್ಲ ಎಂದು ಪೋಷಕರಿಗೆ ಕರೆ ಮಾಡಿದ್ದರು. ಮಗಳ ಮೊಬೈಲ್‌ಗೆ ಕರೆ ಮಾಡಿದರೂ ಅವಳು ಸ್ವೀಕರಿಸಲಿಲ್ಲ. ನನ್ನ ಮಗಳು ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ತಂದೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಈ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಟೋ೧೩ಸಿಪಿಟಿ೯: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''