ವಿದ್ಯಾರ್ಥಿಗಳ ಜಗಳ; ವಿದ್ಯಾರ್ಥಿ ಕಣ್ಣಿಗೆ ತೀವ್ರ ಗಾಯ

KannadaprabhaNewsNetwork |  
Published : Sep 10, 2025, 01:05 AM IST
ಜಮಖಂಡಿ ಎಸಿ ಶ್ವೇತಾ ಬಿಡಿಕರ ಅವರಿಗೆ ಕಾಂಗ್ರೆಸ್‌ ಮುಖಂಡರಾದ ಸುನಿತಾ ಐಹೊಳೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ವಿದ್ಯಾರ್ಥಿಗಳಿಬ್ಬರ ಮಧ್ಯೆ ನಡೆದ ಜಗಳದಲ್ಲಿ ಒಂದನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆ ಚುಚ್ಚಿ ಆತನ ಬಲಗಣ್ಣಿಗೆ ತೀವ್ರ ಗಾಯವಾದ ಘಟನೆ ಸಮೀಪದ ಢವಳೇಶ್ವರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ (ಮೋರಬ ತೋಟ)ದಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಅದೇ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ ಚುಚ್ಚಿ ಗಾಯಪಡಿಸಿದ್ದು, ವಿದ್ಯಾರ್ಥಿಯ ಕಣ್ಣಿನ ಗುಡ್ಡೆಗೆ ಗಾಯವಾಗಿದೆ. ಹೀಗಾಗಿ ಸದ್ಯ ವಿದ್ಯಾರ್ಥಿಯನ್ನು ಕಣ್ಣಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಿಕ್ಷಕರ ವಿರುದ್ಧ ದೂರು ದಾಖಲು: ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಅತಿಥಿ ಶಿಕ್ಷಕಿ ಶಾಲೆಯಲ್ಲಿ ಶಿಸ್ತು ಕಾಪಾಡದೇ ನಿರ್ಲಕ್ಷ್ಯ ವಹಿಸದ ಕಾರಣ ಈ ಘಟನೆ ನಡೆದಿದೆ ಎಂದು ಗಾಯಗೊಂಡ ಬಾಲಕನ ಪೋಷಕರು ಲೋಕಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ಜಮಖಂಡಿ: ಢವಳೇಶ್ವರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಬ್ಬರ ಮಧ್ಯೆ ಜಗಳವಾಗಿ 1ನೇ ತರಗತಿ ವಿದ್ಯಾರ್ಥಿಯ ಕಣ್ಣಿಗೆ ಕಟ್ಟಿಗೆಯಿಂದ ಚುಚ್ಚಿದ್ದರಿಂದ ತೀವ್ರ ಗಾಯವಾಗಿ ನರಳಾಡಿದರೂ ಆಸ್ಪತ್ರೆಗೆ ದಾಖಲಿಸದೇ ಪಾಲಕರು ಬರುವವರೆಗೆ ಕಾಲಹರಣ ಮಾಡಿದ್ದಾರೆ. ನಿರ್ಲಕ್ಷ್ಯ ತೋರಿದ ಶಾಲೆಯ ಮುಖ್ಯಶಿಕ್ಷಕ ಹಾಗೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ದಲಿತ ಮುಖಂಡರು ಹಾಗೂ ಎಐಸಿಸಿ ವೀಕ್ಷಕರು, ಕೆಪಿಸಿಸಿ ಸಂಯೋಜಕಿ ಸುನೀತಾ ಐಹೊಳೆ ಜಮಖಂಡಿ ಎಸಿಗೆ ಮನವಿ ಸಲ್ಲಿಸಿದ್ದಾರೆ. ಶಿಕ್ಷಕರು ಶಾಲೆಯಲ್ಲಿ ಶಿಸ್ತು ಕಾಪಾಡದಿರುವುದು ಹಾಗೂ ಗಂಭೀರ ಗಾಯವಾದರೂ ಮಗುವನ್ನು ಆಸ್ಪತ್ರೆಗೆ ದಾಖಲಿಸದೇ ಪಾಲಕರಿಗೆ ಕರೆ ಮಾಡಿ ಕರೆದುಕೊಂಡು ಹೋಗುವಂತೆ ತಿಳಿಸಿ ಅವರು ಬರುವವರೆಗೆ ಕಾಲಹರಣ ಮಾಡಿ ನಿರ್ಲಕ್ಷ್ಯ ತೋರಿದ್ದು, ಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು. ಕಣ್ಣು ಕಳೆದುಕೊಂಡು ಮಗುವಿಗೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಲೆ ಡಿಎಸ್‌ಎಸ್‌ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ