ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಉಹಾಪೋಹ ಹೇಳಿಕೆ ವಿರುದ್ಧ ಕ್ರಮಕ್ಕೆಆಗ್ರಹ

KannadaprabhaNewsNetwork |  
Published : Aug 05, 2025, 11:45 PM IST
ಫೋಟೋ- ಆರ್‌ ಆರ್‌ ಬಿರಾದಾರ್‌, ಕುಲಸಚಿವರು, ಸಿಯುಕೆ, ಕಲಬುರಗಿ | Kannada Prabha

ಸಾರಾಂಶ

ಜುಲೈ 30ರಂದು ಕೇಂದ್ರೀಯ ವಿಶ್ವವಿದ್ಯಾಲಯದ ಭೂಗರ್ಭಶಾಸ್ತ್ರ ವಿಭಾಗದಲ್ಲಿ ಬಿಎಸ್ಸಿ ಓದುತ್ತಿದ್ದ ಜಯಶ್ರೀ ನಾಯಕ, ವಿಶ್ವವಿದ್ಯಾಲಯದ ಯಮುನಾ ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿವಿ ಕುಲಸಚಿವರು ವಿದ್ಯಾರ್ಥಿನಿ ಸಾವಿಗೆ ಕಾರಣವೇನು ಎಂಬುದರ ತನಿಖೆ ಪೊಲೀಸರಿಂದ ಸಾಗಿರುವಾಗಲೇ ಅನೇಕ ಉಹಾಪೋಹಕ ಹೇಳಿಕೆ ನೀಡೋದು ಸರಿಯಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಜುಲೈ 30ರಂದು ಕೇಂದ್ರೀಯ ವಿಶ್ವವಿದ್ಯಾಲಯದ ಭೂಗರ್ಭಶಾಸ್ತ್ರ ವಿಭಾಗದಲ್ಲಿ ಬಿಎಸ್ಸಿ ಓದುತ್ತಿದ್ದ ಜಯಶ್ರೀ ನಾಯಕ, ವಿಶ್ವವಿದ್ಯಾಲಯದ ಯಮುನಾ ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ವಿವಿ ಕುಲಸಚಿವರು ವಿದ್ಯಾರ್ಥಿನಿ ಸಾವಿಗೆ ಕಾರಣವೇನು ಎಂಬುದರ ತನಿಖೆ ಪೊಲೀಸರಿಂದ ಸಾಗಿರುವಾಗಲೇ ಅನೇಕ ಉಹಾಪೋಹಕ ಹೇಳಿಕೆ ನೀಡೋದು ಸರಿಯಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಕುಲಸಚಿವ ಆರ್‌ ಆರ್‌ ಬಿರಾದಾರ್‌ ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿದ್ದು, ಯಾವಕಾರಣಕ್ಕೆ ಜಯಶ್ರೀ ನಾಯಕ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಪೊಲೀಸ್‌ ತನಿಖೆಯಿಂದ ಹೊರಬರಬೇಕಿದೆ. ಪೊಲಿಸರು ಈಗಾಗಲೇ ವಿದ್ಯಾರ್ಥಿನಿಯ ಮೊಬೈಲ್ ಹಾಗೂ ಅವಳಿಗೆ ಸಂಬಂಧಿಸಿದ ಕೆಲ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಹೇಳಿದ್ದಾರೆ.

ಸಾವಿನ ತನಿಖೆ ಪ್ರಗತಿಯಲ್ಲಿರುವಾಗ ಕೆಲ ವ್ಯಕ್ತಿಗಳು ಉಹಾಪೋಹದ ಮಾಹಿತಿಗಳನ್ನು ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸುವಂತಹ ಮಾಹಿತಿಗಳನ್ನು ವಿವಿಧ ಮಾಧ್ಯಮಗಳ ಮೂಲಕ ಹರಡುವ ಪ್ರಯತ್ನ ಮಾಡುತ್ತಿದ್ದಾರೆ. ವಿಶ್ವ ವಿದ್ಯಾಲಯದ ಘನತೆಗೆ ಧಕ್ಕೆ ತರುವಂತಹ ಈ ಕೃತ್ಯವನ್ನು ವಿಶ್ವ ವಿದ್ಯಾಲಯವು ಖಂಡಿಸುತ್ತದೆ ಹಾಗೂ ಪೊಲೀಸರು ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕುಲಸಚಿವ ಆರ್‌. ಆರ್‌. ಬಿರಾದಾರ್‌ ಆಗ್ರಹಿಸಿದ್ದಾರೆ.

ಮೊಬೈಲ್‌ ಕರೆ ವಿವರ ಕಲೆ ಹಾಕಿರೋ ಪೊಲೀಸ್‌

ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನೀಯ ಮೊಬೈಲ್‌ನ ಒಳ ಮತ್ತು ಹೊರಹೋದ ಕರೆಗಳ ವಿವರವನ್ನೂ ಪೊಲೀಸರು ಪಡೆದಿದ್ದಾರೆ. ವಿಧಿ ವಿಜ್ಞಾನ ವಿಭಾಗದ ಅಧಿಕಾರಿಗಳು ಸಹ ಸ್ಥಳಕ್ಕೆ ಬಂದು ಮಾಹಿತಿ ಪಡೆದಿದ್ದಾರೆ. ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳ ಕಛೇರಿ, ವಿದ್ಯಾರ್ಥಿಯ ವಸತಿನಿಲಯದ ಹಾಗೂ ಉಟಮಾಡುವ ವಸತಿ ನಿಲಯದ ಸಿಸಿ ಟಿವಿ ಫೂಟೇಜ್‌ ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿ ಸಾವಿನ ತನಿಖೆ ಪ್ರಗತಿಯಲ್ಲಿದೆ. ಇದಕ್ಕೆ ಕಾರಣವೇನೆಂಬುದು ತನಿಖೆಯ ನಂತರ ಗೊತ್ತಾಗಲಿದೆ ಎಂದು ಬಿರಿದಾರ್ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಗೆ ಮುನ್ನ ವಿದ್ಯಾರ್ಥಿನಿಯು ವಿವಿಯ ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳನ್ನು ಭೇಟಿಯಾಗಿಲ್ಲ, ಕೆಲ ಮಾಧ್ಯಮಗಳಲ್ಲಿ ಈ ಕುರಿತು ತಪ್ಪು ಮಾಹಿತಿ ಪ್ರಸಾರವಾಗಿದೆ ಎಂದು ಬಿರಾದಾರ್‌ ಹೇಳಿದ್ದಾರೆ.

ಯಾರಿಗಾದರೂ ಲೈಂಗಿಕ ಹಿಂಸೆಯಾದರೆ ದೂರು ಸಲ್ಲಿಸಲು ಹಾಗೂ ವಿಚಾರಣೆಗೆ ಆಂತರಿಕ ದೂರು ಸಮಿತಿ (ಐಸಿಸಿ) ಇದೆ. ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಿಗೆ ಈ ಕುರಿತು ಯಾವುದೇ ಅಧಿಕಾರ ಇರುವುದಿಲ್ಲ.

ವಿದ್ಯಾರ್ಥಿನಿ ಜೀವಂತವಿದ್ದರೆ ಅವಳನ್ನು ರಕ್ಷಿಸಬೇಕೆಂಬ ಸದುದ್ದೇಶದಿಂದ ಭದ್ರತಾ ಅಧಿಕಾರಿ ವಿದ್ಯಾರ್ಥಿನಿಯ ಕೋಣೆಯ ಬಾಗಿಲನ್ನು ಮುರಿದು ತೆಗೆದಿದ್ದಾರೆ. ಆ ಸಂದರ್ಭದಲ್ಲಿ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಅಲ್ಲಿ ಉಪಸ್ಥಿತರಿರಲಿಲ್ಲ.

ವಸತಿ ನಿಲಯದ ಮೇಲ್ವಿಚಾರಕರು ಮತ್ತು ಕೋಣೆಯಲ್ಲಿ ವಾಸವಿದ್ದ ವಿದ್ಯಾರ್ಥಿನಿಯರ ಸಮ್ಮುಖ ಕೋಣೆಯ ಬಾಗಿಲು ಮುರಿಯಲಾಗಿದೆ. ತಕ್ಷಣ ವೈದ್ಯಾಧಿಕಾರಿಗಳು ಆಗಮಿಸಿ ಜೀವ ಹೋಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆಯೆಂದು ತಿಳಿಸಿದ್ದಾರೆ. ತಕ್ಷಣ ಮಾಹಿತಿಯನ್ನು ಪೊಲಿಸರಿಗೆ ಮತ್ತು ವಿದ್ಯಾರ್ಥಿನಿ ಪಾಲಕರಿಗೆ ತಿಳಿಸಲಾಗಿದೆ ಎಂದು ಕುಲಸಚಿವ ಆರ್‌ ಆರ್‌ ಬಿರಾದಾರ್‌ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!