ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಹಿರೇಮಗಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳದ ತಾಲೂಕು ಘಟಕ ಏರ್ಪಡಿಸಿದ್ದ ಸೇವಾದಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತ ಸೇವಾದಳ ತ್ಯಾಗ ಮತ್ತು ಶಿಸ್ತಿಗೆ ಹೆಸರಾದ ಸಂಸ್ಥೆ. ದೇಶದ ಸ್ವಾತಂತ್ರ ಹೋರಾಟಕ್ಕೆ ರಾಷ್ಟ್ರಭಕ್ತರನ್ನು ನೀಡಿದ ಹೆಗ್ಗಳಿಕೆ ಸೇವಾದಳಕ್ಕಿದೆ ಎಂದರು.
ಭಾರತ ಸೇವಾದಳಕ್ಕೆ ಸೇರ್ಪಡೆಯಾಗುವುದರಿಂದ ಮಕ್ಕಳಲ್ಲಿ ದೇಶಭಕ್ತಿ ರಾಷ್ಟ್ರ ಪ್ರೇಮ, ಶಿಸ್ತು, ತ್ಯಾಗ ಮನೋಭಾವ ಬೆಳೆಯುತ್ತದೆ ಎಂದ ಅವರು, ಪೋಷಕರು ಇದನ್ನು ಅರಿತು ತಮ್ಮ ಮಕ್ಕಳನ್ನು ಸೇವಾದಳಕ್ಕೆ ಸೇರಿಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸುವ ನಿಟ್ಟಿನಲ್ಲಿ ಪ್ರತಿ ಶಾಲೆಗಳಲ್ಲೂ ಸೇವಾದಳದ ಘಟಕ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರಗೀತೆ, ರಾಷ್ಟ್ರಧ್ವಜ, ಭಾರತ ಸೇವಾದಳದ ಇತಿಹಾಸ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಭಾರತ ಸೇವಾದಳದ ತಾಲೂಕು ಕಾರ್ಯದರ್ಶಿ ಮಹೇಶಪ್ಪ, ಉಪಾಧ್ಯಕ್ಷ ಕಾಳಯ್ಯ, ಜಿಲ್ಲಾ ಸಂಘಟನಾ ಚಂದ್ರಕಾಂತ, ಮುಖ್ಯ ಶಿಕ್ಷಕಿ ಶಿವಮ್ಮ, ಶಿಕ್ಷಕರಾದ ವಿಲ್ಮಾ, ರಾಧಾಮಣಿ ಉಪಸ್ಥಿತರಿದ್ದರು.