ವಿದ್ಯಾರ್ಥಿಗಳು ಪ್ರಯತ್ನಗಳ ಮೇಲೆ ನಂಬಿಕೆಯಿಡಿ: ಕೆಡಿಪಿ ಸದಸ್ಯೆ ಸೌಮ್ಯ ಅನಂದ್

KannadaprabhaNewsNetwork |  
Published : Jan 20, 2025, 01:34 AM IST
19ಎಚ್ಎಸ್ಎನ್4 : ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂಧನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. | Kannada Prabha

ಸಾರಾಂಶ

ಯಾವುದೇ ವಿದ್ಯಾರ್ಥಿಗಳು ಅದೃಷ್ಟದ ಮೇಲೆ ನಂಬಿಕೆ ಇಡದೇ ಪ್ರಯತ್ನಗಳ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿದಾಗ ಅದು ಸಫಲವಾಗುತ್ತದೆ. ನಮ್ಮ ಮೂಢನಂಬಿಕೆಗಳನ್ನು ಬಿಟ್ಟು ತಮ್ಮ ವೈಚಾರಿಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಬೇಲೂರು

ಕುವೆಂಪು ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಆನ್ ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಗೆದ್ದಂಥ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಕಸಾಪ ಅಧ್ಯಕ್ಷ ಮಾ.ನ. ಮಂಜೇಗೌಡ, ವಿದ್ಯಾರ್ಥಿ ಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮೂಡಿಸುವ ಕೆಲಸವನ್ನು ಈಗಾಗಲೇ ಶಿಕ್ಷಕರು ಮಾಡುತ್ತಿದ್ದಾರೆ. ಬಹುಮುಖ್ಯವಾಗಿ ನಾಡಿನ, ದೇಶದ ಇತಿಹಾಸ, ವಿಜ್ಞಾನ, ತಂತ್ರಜ್ಞಾನ, ಸಂಸ್ಕ್ರತಿ ಬಗ್ಗೆ ಇಂಥ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ತಿಳಿವಳಿಕೆ ಮೂಡಿಸುವ ಮೂಲಕ ಸಾಹಿತ್ಯ ಪರಿಷತ್ ನಮ್ಮ ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಉಳಿಸಿ ಬೆಳಸುವಂತಹ ಕೆಲಸ ಮಾಡಿಕೊಂಡು ಬರುತ್ತಿದೆ ಎಂದರು.

ನಂತರ ಮಾತನಾಡಿದ ಕೆಡಿಪಿ ಸದಸ್ಯೆ ಸೌಮ್ಯ ಅನಂದ್, ಯಾವುದೇ ವಿದ್ಯಾರ್ಥಿಗಳು ಅದೃಷ್ಟದ ಮೇಲೆ ನಂಬಿಕೆ ಇಡದೇ ಪ್ರಯತ್ನಗಳ ಮೇಲೆ ನಂಬಿಕೆ ಇಟ್ಟು ಕೆಲಸ ಮಾಡಿದಾಗ ಅದು ಸಫಲವಾಗುತ್ತದೆ. ನಮ್ಮ ಮೂಢನಂಬಿಕೆಗಳನ್ನು ಬಿಟ್ಟು ತಮ್ಮ ವೈಚಾರಿಕ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಜ್ಞಾನ ವಿಜ್ಞಾನ ಸಮಿತಿಯು ವಿದ್ಯಾರ್ಥಿಗಳಿಗೆ ಮೂಢನಂಬಿಕೆ ವಿರುದ್ಧ ಅರಿವು ಮೂಡಿಸುವ ಉದ್ದೇಶವನ್ನು ಸೂರ್ಯ ಗ್ರಹಣ, ಚಂದ್ರಗ್ರಹಣ, ಆಕಾಶ ವೀಕ್ಷಣೆ, ಪರಿಸರ ಪಯಣ ಹಾಗೂ ಇಂತಹ ರಸಪ್ರಶ್ನೆಗಳನ್ನು ಅಳವಡಿಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

ಜ್ಞಾನ ವಿಜ್ಞಾನ ಸಂಸ್ಥೆಯ ಗೌರವ ಅಧ್ಯಕ್ಷ ಟಿ.ಡಿ . ತಮ್ಮಣ್ಣಗೌಡ ಮಾತನಾಡಿದರು.

ಸಾಹಿತಿ ಇಂದ್ರಮ್ಮ, ಬಿಅರ್ ಸಿ ಶಿವಮರಿಯಪ್ಪ, ಮಕ್ಕಳಿಗೆ ವಿಜ್ಞಾನದ ಮಹತ್ವ ಹಾಗೂ ಸ್ವಚ್ಛ ಭಾರತ ಪ್ಲಾಸ್ಟಿಕ್ ಮುಕ್ತ ಸಮಾಜದ ನಿರ್ಮಾಣದ ಬಗ್ಗೆ ಮಕ್ಕಳಿಗೆ ವಿವರಿಸಿದರು.

ಹಳೆಬೀಡು ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ತೀರ್ಥೇಗೌಡ, ಉಪನ್ಯಾಸಕ ಸುಜಯ್, ಪ್ರಧಾನ ಕಾರ್ಯದರ್ಶಿ ಮೋಹನ್, ಯೋಗೇಶ್ ಹಾಜರಿದ್ದರು.

ಈ ವೇಳೆ ವಿವಿಧ ಶಾಲೆಗಳಿಂದ ಅಗಮಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರನ್ಯಾ ರಾವ್‌ಗೆ ಉಗಾಂಡಾ ವ್ಯಕ್ತಿ ₹ 2 ಕೋಟಿ ದೋಖಾ!
ಹೋಟೆಲ್‌ಗಳಿಗೆ ಇಂದಿನಿಂದ ಹೆಚ್ಚಿನ ಎಲ್ಪಿಜಿ ಪೂರೈಕೆ