ಕೊಪ್ಪಳ: ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಒತ್ತಾಯಿಸಿ ಎಐಡಿಎಸ್ಓ ನೇತೃತ್ವದಲ್ಲಿ ನಗರದ ಸರ್ಕಾರಿ ಪದವಿ ಕಾಲೇಜು ಬಳಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು.
ಎಐಡಿಎಸ್ಓ ರಾಜ್ಯ ಸಮಿತಿ ಸದಸ್ಯೆ ಸಿಂಧೂ.ಕೆ ಮಾತನಾಡಿ, ಅತಿಥಿ ಉಪನ್ಯಾಸಕರಿಲ್ಲದೇ ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಪದವಿ ಕಾಲೇಜುಗಳಿಗೆ ಮಾತ್ರವೇ ಇರುವುದೇ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ವಿದ್ಯಾರ್ಥಿಗಳು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರಾದ ಗಂಗರಾಜ ಅಳ್ಳಳ್ಳಿ, ಶರಣು, ತಿರುಪತಿ, ಆಕಾಶ, ಪರಶುರಾಮ, ಸಾವಿತ್ರಿ, ದುರ್ಗಾ, ನಾಗರತ್ನ, ಗಂಗಾ ಮುಂತಾದವರಿದ್ದರು.