-ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ
ಕನ್ನಡಪ್ರಭ ವಾರ್ತೆ ಸಿಂಧನೂರು
ಜೀವನದಲ್ಲಿ ವಿದ್ಯಾರ್ಥಿಗಳು ಸೋತಾಗ ಅದನ್ನು ನಕಾರತ್ಮಕವಾಗಿ ತೆಗೆದುಕೊಳ್ಳದೇ ಸಕರಾತ್ಮಕ ಗುಣವನ್ನು ರೂಢಿಸಿಕೊಳ್ಳಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶ ಅಚ್ಚಪ್ಪ ದೊಡ್ಡಬಸವರಾಜ್ ಹೇಳಿದರು.ನಗರದ ಸನ್ ರೈಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ ಹಾಗೂ ವಕೀಲರ ಸಂಘ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಹಾಗೂ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
-----
ಫೋಟೋ:10ಕೆಪಿಎಸ್ಎನ್ಡಿ2: ಸಿಂಧನೂರಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ, ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಹಾಗೂ ಹಾಗೂ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನಕ್ಕೆ ಅಪರ ಸಿವಿಲ್ ನ್ಯಾಯಾಧೀಶ ಅಚ್ಚಪ್ಪ ದೊಡ್ಡಬಸವರಾಜ್ ಚಾಲನೆ ನೀಡಿದರು.