ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಿ

KannadaprabhaNewsNetwork |  
Published : Jun 07, 2024, 12:33 AM IST
ಪೋಟೋ 6ಮಾಗಡಿ3: ಮಾಗಡಿ ತಾಲ್ಲೂಕಿನ ಮಾದಿಗೊಂಡನಹಳ್ಳಿ ಗ್ರಾಮ ಪಂಚಾಯತಿ ಡಿಜಿಟಲ್ ಗ್ರಂಥಾಲಯ ಕೇಂದ್ರದಲ್ಲಿ ಸಿಎಂಸಿಎ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ಏರ್ಪಡಿಸಿದ್ದ ಬಂಟ್ವಾಳದ ವಿಶಿಷ್ಟ ಗಾಯಕ ಹಾಗೂ ಯಕ್ಷಗಾನ ಕಲಾವಿದ  ನಾದ ಮಣಿನಾಲ್ಕೂರು ಅವರ ನಾದ ಸಂಗೀತ ಕಾರ್ಯಕ್ರಮನ್ನು ಗಣ್ಯರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಾಗಡಿ: ಗ್ರಾಮೀಣ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸ್ಥಳೀಯವಾಗಿ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡಲ್ಲಿ ಉತ್ತಮ ಭವಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಆರ್.ಸತೀಶ್ ಹೇಳಿದರು.

ಮಾಗಡಿ: ಗ್ರಾಮೀಣ ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸ್ಥಳೀಯವಾಗಿ ಗ್ರಂಥಾಲಯದ ಸೌಲಭ್ಯ ಬಳಸಿಕೊಂಡಲ್ಲಿ ಉತ್ತಮ ಭವಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಗ್ರಾಪಂ ಅಧ್ಯಕ್ಷ ಆರ್.ಸತೀಶ್ ಹೇಳಿದರು.

ತಾಲೂಕಿನ ಮಾದಿಗೊಂಡನಹಳ್ಳಿ ಗ್ರಾಪಂ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಆವರಣದಲ್ಲಿ ಸಿಎಂಸಿಎ ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ "ನನ್ನ ಒಳಿತಿಗಾಗಿ ಗ್ರಂಥಾಲಯ " ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಬಂಟ್ವಾಳದ ವಿಶಿಷ್ಟ ಗಾಯಕ ಹಾಗೂ ಯಕ್ಷಗಾನ ಕಲಾವಿದ ಮಣಿ ನಾಲ್ಕೂರು ಅವರ ನಾದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರು ಮಕ್ಕಳ ಸಮಗ್ರ ವಿಕಸನಕ್ಕಾಗಿ ಗ್ರಂಥಾಲಯಗಳಿಗೆ ಕಳುಹಿಸಬೇಕು. ಪ್ರತಿ ಭಾನುವಾರ ಮಕ್ಕಳಿಗಾಗಿಯೇ ಅಗತ್ಯ ಕೌಶಲ್ಯಗಳನ್ನು ಮತ್ತು ಜೀವನ ಮೌಲ್ಯಗಳನ್ನು ಕಲಿಸುವ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಇದು ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಮತ್ತು ಅವರು ಎಳೆಯ ವಯಸ್ಸಿನಲ್ಲಿಯೇ ಉತ್ತಮ ಪ್ರಜೆಗಳಾಗಲು ಬೇಕಾದ ಮಾನವೀಯ ಮೌಲ್ಯಗಳನ್ನು ಕಲಿಯಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯೆ ಲಕ್ಷ್ಮೀದೇವಿ ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಗ್ರಂಥಾಲಯ ಬಹುದೊಡ್ಡ ಕಾಣಿಕೆ ನೀಡುತ್ತಿದೆ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದು ತಿಳಿಸಿದರು.

ಸಿಎಂಸಿಎ ಸಂಸ್ಥೆ ಹಿರಿಯ ಅಧಿಕಾರಿ ವಿಜಯ್ ರಾಂಪುರ ಮಾತನಾಡಿ, ತಂಬೂರಿ ಕಲಾವಿದ ಮಣಿನಾಲ್ಕೂರು ರಾಜ್ಯಾದ್ಯಂತ ಸಂಚರಿಸಿ ಸಾಂವಿಧಾನಿಕ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ, ನ್ಯಾಯ ಮತ್ತು ಭ್ರಾತೃತ್ವವನ್ನು ಗಾಯನದ ಮೂಲಕ ಯುವಜನರಲ್ಲಿ ಪಸರಿಸುತ್ತಿದ್ದಾರೆ. ಜಿಲ್ಲೆಯ 30 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ, ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ 1 ಗಂಟೆವರೆಗೆ, ಕಳೆದ 15 ವಾರಗಳಿಂದ ಚಟುವಟಿಕೆಗಳ ಅಧಿವೇಶನ ಆನ್‌ಲೈನ್ ನಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಮಕ್ಕಳಲ್ಲಿ ಸಂವಿಧಾನದ ಆಶಯಗಳನ್ನು ಮತ್ತು ಜೀವನ ಕೌಶಲ್ಯಗಳನ್ನು ಅವರಲ್ಲಿ ರೂಪಿಸಲು ಸಹಕಾರಿಯಾಗಿದೆ ಎಂದರು. ಗ್ರಾಪಂ ಉಪಾಧ್ಯಕ್ಷೆ ಎಂ.ಎನ್. ರಂಜಿತಾ, ಸದಸ್ಯರಾದ ವಿ.ಎಂ.ಬಸವರಾಜು, ಭಾಗ್ಯಮ್ಮ, ಲಕ್ಷ್ಮಮ್ಮ, ಸೀತಾರಾಮಯ್ಯ, ಪಂಚಾಯಿತಿ ಕರ ವಸೂಲಿಗಾರ ಚಿಕ್ಕರಂಗಯ್ಯ, ಗ್ರಂಥಾಲಯ ಮೇಲ್ವಿಚಾರಕ ನಂಜಪ್ಪ, ಮಾದಿಗೊಂಡನಹಳ್ಳಿ ಗ್ರಾಮದ ಮುಖಂಡ ನಾಗರಾಜು, ಕಾಯಕ ಮಿತ್ರ ಭವಾನಿ, ಸಿಎಂಸಿಎ ಸಂಸ್ಥೆ ಕಾರ್ಯಕ್ರಮ ವ್ಯವಸ್ಥಾಪಕ ಮಹಮ್ಮದ್ ಶಪೀ, ಹಿರಿಯ ಅಧಿಕಾರಿ ಮೈಸೂರಿನ ಸುನಿತಾ, ಆರ್.ಮಂಜುನಾಥ, ಶಿಲ್ಪ ನಾಗೇನಹಳ್ಳಿ ಇತರರು ಭಾಗವಹಿಸಿದ್ದರು. ಪೋಟೋ 6ಮಾಗಡಿ3:

ಮಾಗಡಿ ತಾಲೂಕಿನ ಮಾದಿಗೊಂಡನಹಳ್ಳಿಯಲ್ಲಿ ಸಿಎಂಸಿಎ ಸಂಸ್ಥೆ ಹಾಗೂ ಗ್ರಾಪಂ ಏರ್ಪಡಿಸಿದ್ದ ಬಂಟ್ವಾಳದ ಯಕ್ಷಗಾನ ಕಲಾವಿದ ಮಣಿನಾಲ್ಕೂರು ಅವರ ನಾದ ಸಂಗೀತ ಕಾರ್ಯಕ್ರಮನ್ನು ಗಣ್ಯರು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ