ಕನ್ನಡಪ್ರಭ ವಾರ್ತೆ ಹಲಗೂರು
ಹಾಡ್ಲಿ ಸರ್ಕಲ್ ಸಮೀಪ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 2026-27ನೇ ಸಾಲಿನ ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ವಿಶೇಷ ಉಪನ್ಯಾಸ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಮತ್ತು ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾನು ಈ ಕಾಲೇಜಿನಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ನಿವೃತ್ತಿ ನಂತರವೂ ನನ್ನನ್ನು ಇಲ್ಲಿ ಕರೆಸಿ ಸನ್ಮಾನಿಸಿರುವುದು ತುಂಬಾ ಸಂತೋಷ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವು ವಿದ್ಯಾರ್ಥಿಗಳು ಈಗ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಯವನ್ನು ಟಿವಿ ಅಥವಾ ಮೊಬೈಲ್ ನೋಡಲು ವ್ಯರ್ಥ ಮಾಡದೆ ನಿಷ್ಠೆಯಿಂದ ಶಿಕ್ಷಕರು ನೀಡುವ ಬೋಧನೆ ಯನ್ನುಅರಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಿರಿ ಸಲಹೆ ನೀಡಿದರು.ಬಸವೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶೈಲಜಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರಿಂದ ಉನ್ನತ ಶಿಕ್ಷಣ ದೊರಕುತ್ತಿದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನ ಹರಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಪೋಷಕರು ಸಹ ಸಹಕರಿಸಬೇಕು ಎಂದರು.
ಅತಿಥಿ ಉಪನ್ಯಾಸಕಿ ಆಶಾ ಅವರ ಚಿಕ್ಕಪ್ಪ ಲಿಂಗರಾಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಮೆಚ್ಚುಗೆಗೆ ಪಾತ್ರರಾದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಭಾರ ಪ್ರಾಂಶುಪಾಲ ಶಹೀಬ್ ಖಾನ್ ಅಧ್ಯಕ್ಷತೆ ವಹಿಸಿದ್ದರು.