ಉತ್ಸಾಹದಿಂದ ಪರೀಕ್ಷೆ ಎದುರಿಸಿದ ವಿದ್ಯಾರ್ಥಿಗಳು

KannadaprabhaNewsNetwork |  
Published : Mar 19, 2026, 02:15 AM IST
ಪೋಟೊ18ಕೆಎಸಟಿ1: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಎಸ್ಎಸ್ಎಲ್ಸಿ  ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯ ಪರೀಕ್ಷೆಯನ್ನು ಬರೆಯುತ್ತಿರುವದು. | Kannada Prabha

ಸಾರಾಂಶ

ಒಟ್ಟು 15 ಪರೀಕ್ಷಾ ಕೇಂದ್ರಗಳ ಪೈಕಿ 4475 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 4410 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.

ಕುಷ್ಟಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ನಡೆದ ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ಎದುರಿಸಿದರು.

ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಹಾಗೂ ಹೂ ಮಾಲೆ ಹಾಕುವ ಮೂಲಕ ಸಿಹಿ ತಿನಿಸಿ ಸ್ವಾಗತಿಸಿ ಶುಭ ಹಾರೈಸಿ ಭಯಮುಕ್ತವಾಗಿ ಪರೀಕ್ಷೆ ಎದುರಿಸುವಂತೆ ಧೈರ್ಯ ತುಂಬಿದರು.

ತಾಲೂಕಿನ ಒಟ್ಟು 15 ಪರೀಕ್ಷಾ ಕೇಂದ್ರಗಳ ಪೈಕಿ 4475 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದರಲ್ಲಿ 4410 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.ಉಳಿದ 65 ವಿದ್ಯಾರ್ಥಿಗಳು ಗೈರಾಗಿದ್ದರು.

ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷಾ ಕೊಠಡಿಯಲ್ಲಿ ವೆಬ್ ಕಾಸ್ಟ್ ಸಂಪರ್ಕವಿರುವ ಸಿಸಿ ಕ್ಯಾಮೇರಾ ಅಳವಡಿಸಿದ್ದರಿಂದ ಕಟ್ಟುನಿಟ್ಟಾಗಿ ನಡೆಸಲಾಗಿದೆ.

ಅಧಿಕಾರಿಗಳ ಭೇಟಿ: ಬಿಇಒ ಉಮಾದೇವಿ ಬಸಾಪೂರು, ತಹಸೀಲ್ದಾರ ಅಶೋಕ ಶಿಗ್ಗಾಂವಿ, ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶಪ್ಪ ಮೆಣೇದಾಳ ಸೇರಿದಂತೆ ವಿವಿಧ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಪೊಲೀಸರು ಬಂದೋಬಸ್ತ್‌ ಒದಗಿಸಿದ್ದರು. ಸ್ಥಳೀಯ ಆಡಳಿತ ಕುಡಿವ ನೀರಿನ ಸೌಲಭ್ಯ ಒದಗಿಸಿದ್ದರು. ಮುಂಜಾಗೃತೆಯಾಗಿ ಆರೋಗ್ಯ ಸಿಬ್ಬಂದಿ ನೇಮಿಸಿದ್ದರು.

ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಭೇಟಿ: ಡಿಡಿಪಿಐ ಸೋಮಶೇಖರಗೌಡ ಪಾಟೀಲ ಪರೀಕ್ಷಾ ಕೊಠಡಿಗಳನ್ನು ಪರೀಶಿಲಿಸಿದರು. ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ವಾರ್ಷೀಕ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದೆ ಶಿಕ್ಷಣ ಇಲಾಖೆ ನಿರ್ದೇಶನದಂತೆ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ದೋಟಿಹಾಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಕನ್ನಡ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿ ಜರುಗಿದೆ.ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮೇರಾ ಹಾಗೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು.

ಡಿ ಸುರೇಶ, ಮುಖ್ಯಅಧೀಕ್ಷಕರು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ದೋಟಿಹಾಳ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲೆಲ್ಲೂ ಯುಗಾದಿಯ ಸಂಭ್ರಮ: ಆದರೆ ಕೂಡ್ಲಿಗಿಯಲ್ಲಿ ಸೂತಕದ ಛಾಯೆ!
ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್