ಕುಷ್ಟಗಿ: ಇಂದಿನ ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಆಸಕ್ತಿ ವಹಿಸಿಕೊಳ್ಳದೆ ಮೊಬೈಲ್ ನೋಡುತ್ತಾ ಕಾಲಹರಣ ಮಾಡುತ್ತಿರುವುದು ಖೇದದ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಹಿತ್ಯ ರೂಢಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ. ಎಸ್.ವಿ. ಡಾಣಿ ಹೇಳಿದರು.
ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.
ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವೀರೇಶ ಗಜೇಂದ್ರಗಡ ವಿಶೇಷ ಉಪನ್ಯಾಸ ಕಾರ್ಯಕ್ರಮ ನೀಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರ ಮೂಲಕ ವೈಚಾರಿಕತೆ ಜೀವನದಲ್ಲಿ ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಮಹಾತ್ಮ ಗಾಂಧಿಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಪುಣ್ಯತಿಥಿ ಆಚರಿಸಲಾಯಿತು.