ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ೨೦೨೪- ೨೫ನೇ ಸಾಲಿನ ಸಾಂಸ್ಕೃತಿಕ, ಎನ್.ಎಸ್.ಎಸ್., ಎನ್.ಸಿ.ಸಿ., ಕ್ರೀಡೆ, ರೇವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್ ಹಾಗೂ ಇತರೆ ಸಮಿತಿಗಳ ಚಟುವಟಿಕೆಗಳ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಈಗ ನೀವು ಸಮಯ ವ್ಯರ್ಥ ಮಾಡಿದರೆ, ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಓದು, ಕ್ರೀಡೆ, ಎಲ್ಲದಕ್ಕೂ ಸಮಯ ಮೀಸಲಿಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಸ್ತು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ನಗರ ಪ್ರಥಮ ದರ್ಜೆ ಕಾಲೇಜು ಇಡೀ ಜಿಲ್ಲೆಯಲ್ಲೇ ಉತ್ತಮ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯ ಹಲವು ಭಾಗಗಳಿಂದ ಸಾಕಷ್ಟು ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಉತ್ತಮ ಫಲಿತಾಂಶ ಹೊರಬರಲು ಕಾರಣೀಭೂತರಾಗಿದ್ದಾರೆ. ಈ ದಿಸೆಯಲ್ಲಿ ಕಾರ್ಯ ನಿರ್ವಹಿಸಿದ ಉಪನ್ಯಾಸಕರಿಂದ ಹಿಡಿದು ವಿದ್ಯಾರ್ಥಿಗಳವರೆಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಜಾನಪದ ವಿದ್ವಾಂಸ ಹಾಗೂ ಜಾನಪದ ಪರಿಷತ್ ಅಧ್ಯಕ್ಷ ಹಿ.ಚಿ.ಬೋರಲಿಂಗಯ್ಯ ಮಾತನಾಡಿ, ವಿದ್ಯಾರ್ಥಿಗಳು ಜನಪದದತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ಅಳಿವಿನ ಅಂಚಿಗೆ ಸರಿಯುತ್ತಿರುವ ಜಾನಪದ ಕಲಾ ಪ್ರಕಾರಗಳನ್ನು ಅರ್ಥಮಾಡಿಕೊಂಡು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ವಿದ್ಯಾರ್ಥಿ ದಿಸೆಯಿಂದಲೇ ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವಾಸಿಲ್ ಅಲಿಖಾನ್, ಸದಸ್ಯ ಸತೀಶ್ ಬಾಬು, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಜಗದೀಶ್ ನಡುವಿನಮಠ, ಎನ್ಎಸ್ಎಸ್ ಸಮಿತಿ ಸಂಚಾಲಕ ಡಾ.ನಾಗರಾಜು, ಡಾ.ಪುರುಷೋತ್ತಮ್, ಡಾ.ಅನಿತಾರಾವ್, ಡಾ.ಪ್ರಭು ಉಡಾಸೆ, ಡಾ.ಬೋರೇಗೌಡ, ಡಾ.ರಾಜಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ನಂಜುಂಡ, ಮುಜಾಹಿದ್ ಖಾನ್ ಸೇರಿದಂತೆ ಹಲವರು ಹಾಜರಿದ್ದರು.