ಮುಟ್ಟಳ್ಳಿ ಶಾಲೆಯ ವಿದ್ಯಾರ್ಥಿಗಳಿಂದ ಗದ್ದೆಯಲ್ಲಿ ಭತ್ತ ನಾಟಿ

KannadaprabhaNewsNetwork |  
Published : Jul 10, 2026, 01:00 AM IST
ವಿದ್ಯಾರ್ಥಿಗಳು ಭತ್ತದ ನಾಟಿ ಮಾಡಿದರು. | Kannada Prabha

ಸಾರಾಂಶ

ತಾಲೂಕಿನ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳನ್ನು ನೇರವಾಗಿ ಭತ್ತದ ಗದ್ದೆಗೆ ಕರೆದೊಯ್ದು ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಮೂಲಕ ಪಠ್ಯದಲ್ಲಿನ ಕೃಷಿ ವಿಷಯವನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.

ಕನ್ನಡಪ್ರಭ ವಾರ್ತೆ ಭಟ್ಕಳ

ತಾಲೂಕಿನ ಮುಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳನ್ನು ನೇರವಾಗಿ ಭತ್ತದ ಗದ್ದೆಗೆ ಕರೆದೊಯ್ದು ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಮೂಲಕ ಪಠ್ಯದಲ್ಲಿನ ಕೃಷಿ ವಿಷಯವನ್ನು ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.

ಕೃಷಿ ಕೇವಲ ಪುಸ್ತಕದ ಪಾಠವಲ್ಲ, ಬದುಕಿನ ಅನುಭವ ಎಂಬುದನ್ನು ಮಕ್ಕಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ವಿಶಿಷ್ಟ ಕೃಷಿ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಗದ್ದೆ ಸಿದ್ಧಪಡಿಸುವ ವಿಧಾನ, ಭತ್ತದ ಸಸಿ ಬೆಳೆಸುವ ಪ್ರಕ್ರಿಯೆ, ನಾಟಿ ಮಾಡುವ ಕ್ರಮ ಹಾಗೂ ಬೇಸಾಯದ ವಿವಿಧ ಹಂತಗಳ ಕುರಿತು ರೈತರ ಮಾರ್ಗದರ್ಶನದಲ್ಲಿ ಮಾಹಿತಿ ನೀಡಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವತಃ ಗದ್ದೆಗಿಳಿದು ಭತ್ತದ ಸಸಿಗಳನ್ನು ನಾಟಿ ಮಾಡಿ ಕೃಷಿ ಕಾರ್ಯದ ಅನುಭವ ಪಡೆದರು. ಕೆಸರಿನಲ್ಲಿ ಕೆಲಸ ಮಾಡುವ ಹೊಸ ಅನುಭವ ಮಕ್ಕಳಲ್ಲಿ ಉತ್ಸಾಹ ಮೂಡಿಸಿದ್ದು, ರೈತರ ಶ್ರಮದ ಮಹತ್ವವನ್ನು ಹತ್ತಿರದಿಂದ ಅರಿಯುವ ಅವಕಾಶವೂ ದೊರೆಯಿತು.

ಕೃಷಿಕ ವೆಂಕಟರಮಣ ನಾಯ್ಕ ಮಾತನಾಡಿ, ತರಗತಿಯಲ್ಲಿ ಪಾಠ ಹೇಳುವುದಕ್ಕಿಂತ ಪ್ರಾಯೋಗಿಕವಾಗಿ ತೋರಿಸಿದರೆ ಮಕ್ಕಳು ವಿಷಯವನ್ನು ಸುಲಭವಾಗಿ ಅರ್ಥಮಾಡಿಕೊಳ್ಳುತ್ತಾರೆ. ಇದೇ ಉದ್ದೇಶದಿಂದ ಸ್ಥಳೀಯರ ಸಹಕಾರದೊಂದಿಗೆ ಗದ್ದೆಯಲ್ಲಿಯೇ ಕೃಷಿ ಶಿಕ್ಷಣ ನೀಡಲಾಗಿದೆ. ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ನಾಟಿ ಕಾರ್ಯದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕಿ ಗಂಗಾ ಮೊಗೇರ ಮಾತನಾಡಿ, ಪಠ್ಯದಲ್ಲಿರುವ ಕೃಷಿ ಚಟುವಟಿಕೆಯನ್ನು ಕೇವಲ ಪುಸ್ತಕಕ್ಕೆ ಸೀಮಿತಗೊಳಿಸದೆ, ನೈಜ ಪರಿಸರದಲ್ಲಿಯೇ ಅನುಭವಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ರೈತರ ಪರಿಶ್ರಮದ ಮಹತ್ವವನ್ನು ಮಕ್ಕಳು ಅರಿತುಕೊಂಡಿದ್ದು, ನಾಟಿ ಮಾಡುವ ವಿಧಾನ ಸೇರಿದಂತೆ ಕೃಷಿಯ ವಿವಿಧ ಅಂಶಗಳ ಕುರಿತು ಕುತೂಹಲದಿಂದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು ಎಂದರು.

ಕಾರ್ಯಕ್ರಮದಲ್ಲಿ ಮುಟ್ಟಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ರಜನಿ ನಾಯ್ಕ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶೈಲಾ ನಾಯ್ಕ, ಗ್ರಾಪಂ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ, ಶಿಕ್ಷಕರಾದ ಜಯಶ್ರೀ ಆಚಾರ್ಯ, ವಿಜಯಕುಮಾರ, ಲತಾ ನಾಯ್ಕ, ಎಸ್‌ಡಿಎಂಸಿ ಸದಸ್ಯರು, ಪಾಲಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

12ರಂದು ಕರಾವಳಿ ಪ್ರತಿಬಿಂಬ ಕಾರ್ಯಕ್ರಮ
ಕಣ್ಣಿನ ಆರೈಕೆ ನಿಯಮಿತವಾಗಿ ಮಾಡಿಕೊಳ್ಳಿ: ಡಾ. ಸಲೀಂ ಕಿತ್ತೂರ