ಬಿಸಿಎಂ ಹಾಸ್ಟೆಲ್‌ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

KannadaprabhaNewsNetwork |  
Published : Oct 19, 2024, 12:20 AM IST
ಪೋಟೋ೧೮ಸಿಎಲ್‌ಕೆ೧: ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಬಿಸಿಎಂ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಳ್ಳಕೆರೆ: ನಗರದ ಪಾವಗಡ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಹಾಸ್ಟಲ್ ವಾರ್ಡನ್ ಸರಿಯಾದ ಸೌಲಭ್ಯ ನೀಡದೆ ಯಾವುದೇ ವ್ಯವಸ್ಥೆ ಕಲ್ಪಿಸದೆ ದುಂಡಾವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಸ್ಟಲ್ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಚಳ್ಳಕೆರೆ: ನಗರದ ಪಾವಗಡ ರಸ್ತೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಬಿಸಿಎಂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಹಾಸ್ಟಲ್ ವಾರ್ಡನ್ ಸರಿಯಾದ ಸೌಲಭ್ಯ ನೀಡದೆ ಯಾವುದೇ ವ್ಯವಸ್ಥೆ ಕಲ್ಪಿಸದೆ ದುಂಡಾವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಸ್ಟಲ್ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಪ್ರತಿನಿತ್ಯ ನಿಲಯ ಮೇಲ್ವಿಚಾರಕರೇ ಮದ್ಯ ಸೇವನೆ ಮಾಡಿ ನಿಲಯಕ್ಕೆ ಬಂದು ವಿದ್ಯಾರ್ಥಿಗಳ ಮೇಲೆ ವಿಕೇಟ್‌ನಿಂದ ಹಲ್ಲೆ ನಡೆಸುತ್ತಾರೆ. ಬೆದರಿಕೆ ಹಾಕುತ್ತಾರೆ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಸೌಲಭ್ಯಗಳ ಬಗ್ಗೆ ಪ್ರಶ್ನಿಸಿದರೆ ಅಂತವರನ್ನೇ ಗುರಿಯಾಗಿಸಿ ಅವರಿಗೆ ಊಟ ನೀಡದೆ, ದೌರ್ಜನ್ಯವೆಸಗುತ್ತಾರೆ ಎಂದು ದೂರಿದರು.

ನೀವು ಯಾರಿಗೆಬೇಕಾದರೂ ದೂರು ನೀಡಿ ನನ್ನ ಮುಂದೆನಡೆಯಲ್ಲ. ನನ್ನ ಸಂಬಂಧಿಯೇ ಹಿಂದುಳಿದವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿಯಾಗಿದ್ದಾರೆ. ಎಂ.ಪಿ, ಎಂಎಲ್‌ಎಗೂ ನನ್ನ ಮೇಲೆ ದೂರು ನೀಡಿದರೂ ನಾನು ಎದರುವ ಮನುಷ್ಯನಲ್ಲ. ಇಲ್ಲಿ ನನ್ನ ಆಡಳಿತವೇ ನಡೆಯುತ್ತದೆ. ನಾನು ಹೇಳಿದಾಗೆ ಕೇಳಿಕೊಂಡು ಇರಬೇಕು ಇಲ್ಲವಾದರೆ ನಿಮ್ಮನ್ನು ಹಾಸ್ಟಲ್‌ನಿಂದ ಹೊರಹಾಕುತ್ತೇನೆಂದು ದಮ್ಕಿಹಾಕುತ್ತಾರೆಂದು ಆರೋಪಿಸಿದರು.

ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ತಹಶೀಲ್ದಾರ್ ರೇಹಾನ್‌ಪಾಷ ಮಾತನಾಡಿ, ಯಾವುದೇ ವಿದ್ಯಾರ್ಥಿಗಳು ಆತಂಕ ಪಡಬೇಡಿ, ಸಂಬಂಧಪಟ್ಟ ಅಧಿಕಾರಿಗೆ ಮಾಹಿತಿ ನೀಡಿ ಅವ್ಯವಸ್ಥೆಯನ್ನು ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.

ವಿದ್ಯಾರ್ಥಿಗಳಾದ ಸಿ.ಕಾರ್ತಿಕ್, ಜಿ.ಆರ್.ಉದಯ್, ಕರಿಬಸಣ್ಣ, ಕೆ.ಎಸ್.ಶೇಷಾದ್ರಿ ಬಿ.ಮಧು, ಸಂದೇಶ, ವಿ.ವಿಷ್ಣುಮೂರ್ತಿ, ಭಾಷ, ಸಂತೋಷ್, ಅಜಯ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ