- ಅನೇಕ ಕಡೆ ಪಂಕ್ತಿ ತಾರತಮ್ಯ ಬೇರೂರಿದೆಯಲ್ಲವೇ?, ಸಮಾಜದಲ್ಲಿ ಇಂದಿಗೂ ಮೌಢ್ಯ ಬೇರೂರಿದೆಯಲ್ಲವೇ?! - - -
ಪಂಕ್ತಿ ಪದ್ಧತಿಯಲ್ಲಿ ಇಂದಿಗೂ ತಾರತಮ್ಯ ಇದೆಯಲ್ಲವೇ?, ಹೆಣ್ಣು ಮತ್ತು ಗಂಡು ಎಂಬ ಎರಡೇ ಜಾತಿ ಇರುವುದೆಂದು ಬಸವಣ್ಣನವರು ಹೇಳಿದ್ದರೂ ಜನರು ಜಾತಿ ಜಾತಿ ಎನ್ನುತ್ತಿದ್ದಾರಲ್ಲಾ?, ಸಮಾಜದಲ್ಲಿ ಇಂದಿಗೂ ಮೌಢ್ಯ ಬೇರೂರಿದೆಯಲ್ಲವೇ?
ಹೀಗೆ ಹತ್ತು ಹಲವಾರು ಪ್ರಶ್ನೆಗಳು ವಿವಿಧ ಮಠಾಧೀಶರಿಗೆ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಕೇಳಿಬಂದರೆ, ಆ ಎಲ್ಲಾ ಪ್ರಶ್ನೆಗಳಿಗೆ ವಚನ ಸಂವಾದ ಕಾರ್ಯಕ್ರಮದಲ್ಲಿ ಮಠಾಧೀಶರು ಸಮರ್ಪಕವಾಗಿ ವಿವರಿಸಿ, ಮಕ್ಕಳ ಪ್ರಶ್ನೆಗೆ ಸಮಾಧಾನದ ಉತ್ತರ ನೀಡುವ ಪ್ರಯತ್ನ ಮಾಡಿದರು.ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ವಚನ ಸಂವಾದ ಕಾರ್ಯಕ್ರಮದಲ್ಲಿ ವಚನ ಸಂವಾದವನ್ನು ಅಭಿಯಾನದ ಅಧ್ಯಕ್ಷ, ಅಪೂರ್ವ ಹೋಟೆಲ್ ಸಮೂಹಗಳ ಅಧ್ಯಕ್ಷ ಅಣಬೇರು ರಾಜಣ್ಣ ಉದ್ಘಾಟಿಸಿ ಮಾತನಾಡಿದರು.
ಮತ್ತೋರ್ವ ವಿದ್ಯಾರ್ಥಿನಿ ಶಶಿಕಲಾ, ಇಂದಿಗೂ ಸಮಾಜದಲ್ಲಿ ಮೌಢ್ಯವಿದೆಯೆಲ್ಲವೇ ಎಂದು ಪ್ರಶ್ನಿಸಿದರು. ಅದಕ್ಕೆ ಸ್ವಾಮೀಜಿ ಮಾತನಾಡಿ, ಪ್ರೀತಿ, ವಿಶ್ವಾಸದಿಂದ ಮೌಢ್ಯ ಅಳಿಸಬೇಕು. ವಚನ ಸಾಹಿತ್ಯ ಅಧ್ಯಯನ ಹೆಚ್ಚಾದರೆ ಮೌಢ್ಯ ತನ್ನ ಪಾಡಿಗೆ ತಾನೇ ದೂರವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ವಚನ ಸಾಹಿತ್ಯ ಅಧ್ಯಯನಕ್ಕೆ ಮುಂದಾಗಬೇಕು ಎಂದು ಹೇಳಿದರು.
ವಿದ್ಯಾರ್ಥಿ ಆದಿತ್ಯ ಬಸವಣ್ಣನ ತತ್ವಗಳು ಇಂದು ಪ್ರತಿಫಲಿಸಿವೆಯಾ ಎಂಬ ಪ್ರಶ್ನೆ ಮುಂದಿಟ್ಟರು. ಅದಕ್ಕೆ ಶ್ರೀಗಳು ಸಂವಿಧಾನದಲ್ಲೇ ಬಸವ ತತ್ವಗಳು ಪ್ರತಿಫಲಿಸಿವೆ. ಇನ್ನೂ ಹಲವಾರು ತತ್ವಗಳನ್ನು ಜನರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಕಾಲೇಜು ಪ್ರಾಚಾರ್ಯರಾದ ಕಮಲಾ ಸೊಪ್ಪಿನ್ ಅಧ್ಯಕ್ಷತೆ ವಹಿಸಿದ್ದರು. ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದೇವರು, ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ತೋಂಟದ ಸಿದ್ಧರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಕೂಡಲ ಸಂಗಮದ ಬಸವ ಧರ್ಮ ಪೀಠದ ಗಂಗಾ ಮಾತಾಜೀ, ರುದ್ರಾಕ್ಷಿ ಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ, ಶ್ರೀ ಬಸವಾನಂದ ಸ್ವಾಮೀಜಿ, ಅಕ್ಕ ನಾಗಲಾಂಬಿಕಾ ಮಾತಾಜಿ, ಇತರೆ ಮಠಾಧೀಶರು ಸಾನಿಧ್ಯ ವಹಿಸಿದ್ದರು.
-15ಕೆಡಿವಿಜಿ16, 17, 18: