ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಶಿಬಿರಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ಬಿ.ಎ.ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಕರೆ ನೀಡಿದರು.ಚಿತ್ರನಟ ಕೆ.ಆರ್.ಪೇಟೆ ಶಿವರಾಜು ಮಾತನಾಡಿ, ವಿದ್ಯಾರ್ಥಿ ಜೀವನದ ಸವಿನೆನಪುಗಳು ನಮ್ಮಲ್ಲಿ ಸದಾ ಚಿರನೂತನವಾಗಿರುತ್ತವೆ. ವಿದ್ಯಾರ್ಥಿಗಳು ಕಲಿಕೆಗೆ ನೀಡುವಷ್ಟೆ ಆದ್ಯತೆಯನ್ನು ಕ್ರಿಯಾತ್ಮಕ ಕಾರ್ಯಚಟುವಟಿಕೆಗಳಿಗೂ ನೀಡಬೇಕು ಎಂದರು.
ಸಮಾರಂಭದಲ್ಲಿ ಪ್ರಾಂಶುಪಾಲ ಕೆಂಡಗಣ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಧೀಕ್ಷಕ ಎಂ.ಎಸ್.ಪುರುಷೋತ್ತಮ್, ಸಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಕೆ.ಪಿ.ಪ್ರತಿಮಾ, ಐ.ಕ್ಯೂ.ಎ.ಸಿ ಸಂಚಾಲಕ ಡಾ.ಜಿ.ಮಧು, ಕ್ರೀಡಾ ಮತ್ತು ರೆಡ್ ಕ್ರಾಸ್ ಸಮಿತಿಯ ಸಂಚಾಲಕ ಮಾಹದೇವಸ್ವಾಮಿ, ಎನ್.ಎಸ್.ಎಸ್ ಘಕಟದ ಸಂಚಾಲಕ ಎಂ.ಶಿವಸ್ವಾಮಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಮಿತಿಯ ಸಂಚಾಲಕಿ ನಫೀಸಾ ನಾಯಕವಾಡಿ ಇದ್ದರು.
ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸೆ.17ರಂದು ಡಾ.ನಿಶಾಂತ್ ಸವಿನೆನಪಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸೊಸೈಟಿ ಆವರಣದಲ್ಲಿ ಏರ್ಪಡಿಸಲಾಗಿದೆ.ಎಸ್ಟಿಜಿ ಗ್ರೂಪ್ಸ್ ಚಿನಕುರಳಿ ಮತ್ತು ಸ್ಪಂದನ ಆಸ್ಪತ್ರೆ ಮಂಡ್ಯ ವತಿಯಿಂದ ನಡೆಯುವ ಶಿಬಿರದಲ್ಲಿ ಬಿಪಿ, ಸಕ್ಕರೆ ಕಾಯಿಲೆ, ಸ್ತ್ರೀರೋಗ ತಪಾಸಣೆ, ಕೀಲು ಮತ್ತು ಮೂಳೆ ಯೋಗ ತಪಾಸಣೆ, ಕಣ್ಣಿನ ತಪಾಸಣೆ, ಚರ್ಮ ರೋಗ, ಇಸಿಜಿ ಮತ್ತು ರಕ್ತಹೀನತೆ, ತುರ್ತು ಚಿಕಿತ್ಸ ಜಾಗೃತಿ ವಿಚಾರ ಸಂಕಿರಣ, ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಬೆಳಗ್ಗೆ 9 ರಿಂದ ಸಂಜೆ ೪ ಗಂಟೆವರೆಗೂ ನಡೆಯಲಿದೆ. ಚಿನಕುರಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಆಯೋಜಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.ಇಂದು ವಿಶ್ವ ಓಜೋನ್ ದಿನ, ಅರಣ್ಯ ಸಾಕ್ಷರತಾ ಆಂದೋಲನಮಂಡ್ಯ: ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ , ಸರ್ಕಾರಿ ಪ್ರೌಢಶಾಲೆ ವತಿಯಿಂದ ತಾಲೂಕಿನ ಸಂತೆಕಸಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸೆ.17 ರಂದು ವಿಶ್ವ ಓಜೋನ್ ದಿನ ವಿದ್ಯಾರ್ಥಿಗಳ ಮೂಲಕ ಅರಣ್ಯ ಸಾಕ್ಷತಾ ಆಂದೋಲನವನ್ನು ಆಯೋಜಿಸಲಾಗಿದೆ. ಮುರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಲೋಕೇಶ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೌಢಶಾಲೆ ಮುಖ್ಯಶಿಕ್ಷಕರಾದ ನಾಸೀರ್ ಹುಸೇನ್ ಅಧ್ಯಕ್ಷತೆ ವಹಿಸುವರು. ಸಂಪನ್ಮೂಲ ವ್ಯಕ್ತಿಗಳಾದ ಎಚ್.ಎಂ.ರಶ್ಮಿ ಉಪನ್ಯಾಸ ನೀಡುವರು. ಯುವ ಪ್ರಶಸ್ತಿ ಪುರಸ್ಕೃತ ಬಸವರಾಜು ಸಂತೆಕಸಲಗೆರೆ ಅವರು ಪರಿಸರ ಜಾಗೃತಿ ಗೀತಗಾಯನ ನಡೆಸಿಕೊಡುವರು ಎಂದು ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೀಶ್ ತಿಳಿಸಿದ್ದಾರೆ.