ವಿದ್ಯಾರ್ಥಿಗಳಲ್ಲಿನ ಅಜ್ಞಾನ ತೊಲಗಿಸಿ ವಿಜ್ಞಾನ ತುಂಬಬೇಕು: ಲಿಂಗರಾಜು

KannadaprabhaNewsNetwork |  
Published : Nov 11, 2025, 01:45 AM IST
10ಕೆಎಂಎನ್ ಡಿ15 | Kannada Prabha

ಸಾರಾಂಶ

ವಿದೇಶಿಗರು ವಿಜ್ಞಾನವನ್ನು ಬಳಸಿಕೊಂಡು ಜ್ಞಾನದ ಮೂಲಕ ದೇಶವನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ಆದರೆ, ದೇಶದಲ್ಲಿ ಮನಸ್ಸಿನಲ್ಲಿ ಶಾಶ್ವತವಾಗಿ ಮೂಢನಂಬಿಕೆ ಉಳಿಯುವಂತೆ ಮಾಡಲು ದೊಡ್ಡ ಮಟ್ಟದಲ್ಲಿಯೇ ಪಿತೂರಿ ನಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ವಿದ್ಯಾರ್ಥಿಗಳಲ್ಲಿನ ಅಜ್ಞಾನ ತೊಳಗಿಸಿ ವಿಜ್ಞಾನ ತುಂಬುವ ಮೂಲಕ ವೈಜ್ಞಾನಿಕ ಚಿಂತನೆಗೆ ಒಳಗಾಗುವಂತೆ ಮಾಡಬೇಕು ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಲಿಂಗರಾಜು ತಿಳಿಸಿದರು.

ಸಮೀಪದ ಮಾರಹಳ್ಳಿ ಆದರ್ಶ ವಿದ್ಯಾಲಯದಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿ, ಪ್ರಸ್ತುತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾವಂತರೇ ಮೂಢನಂಬಿಕೆಗಳಿಗೆ ಮೊರೆ ಹೋಗುತ್ತಿರುವುದು ವಿಪರ್ಯಾಸ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ವಿದೇಶಿಗರು ವಿಜ್ಞಾನವನ್ನು ಬಳಸಿಕೊಂಡು ಜ್ಞಾನದ ಮೂಲಕ ದೇಶವನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ಆದರೆ, ದೇಶದಲ್ಲಿ ಮನಸ್ಸಿನಲ್ಲಿ ಶಾಶ್ವತವಾಗಿ ಮೂಢನಂಬಿಕೆ ಉಳಿಯುವಂತೆ ಮಾಡಲು ದೊಡ್ಡ ಮಟ್ಟದಲ್ಲಿಯೇ ಪಿತೂರಿ ನಡೆಯುತ್ತಿದೆ. ವಿದ್ಯಾರ್ಥಿಗಳು ತಮ್ಮ ಕೌಶಲ್ಯದ ಮೂಲಕ ವಿಜ್ಞಾನ ಮಾದರಿ ತಯಾರಿಸುತ್ತಿರುವುದು ವೈಜ್ಞಾನಿಕ ಮನೋಭಾವನೆಗೆ ಬುನಾದಿಯಾಗಿದೆ. ವಿಜ್ಞಾನದಲ್ಲಿ ಪ್ರಶ್ನಿಸಿದರೇ ಮಾತ್ರ ವಾಸ್ತವದ ಸತ್ಯ ಮತ್ತು ನಿಖರತೆ ತಿಳಿಯಲು ಸಾಧ್ಯ ಎಂದರು.

ನಿವೃತ್ತ ಶಿಕ್ಷಕ ನಂಜರಾಜು ಮಾತನಾಡಿ, ಅಡುಗೆ ಮನೆಯೇ ಮೂಲ ವಿಜ್ಞಾನದ ಪ್ರಭಾವಶಾಲಿ ಪ್ರಯೋಗ ಶಾಲೆಯಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ಅನ್ವೇಷಣೆ, ಸಂಶೋಧನೆಗಳಿಗೆ ಹೆಚ್ಚಿನ ಅವಕಾಶಗಳಿವೆ. ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಪ್ರತಿಯೊಂದು ವಿಷಯವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ತಾರ್ಕಿಕವಾಗಿ ವಿಜ್ಞಾನದ ಪರಿಕಲ್ಪನೆಗಳನ್ನು ಅರ್ಥೈಸಿಕೊಳ್ಳಬೇಕೆಂದು ಕರೆ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ತಳಗವಾದಿ ಪ್ರಕಾಶ್ ಮಾತನಾಡಿ, ಶಿಕ್ಷಕರು ವಿಜ್ಞಾನವನ್ನು ವಿದ್ಯಾರ್ಥಿಗಳ ದೈನಂದಿನ ಜೀವನಕ್ಕೆ ಅನ್ವಯಿಸಿ ಪರಿಣಾಮಕಾರಿಯಾಗಿ ಬೋಧಿಸಿ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಬೇಕು. ಅದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗವುದು ಎಂದರು.

ಜಿಲ್ಲಾ ಮಟ್ಟದ ಕ್ರೀಡಕೂಟದಲ್ಲಿ ಅದರ್ಶ ಶಾಲೆ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿ ತಾಲೂಕಿಗೆ ಕೀರ್ತಿ ತಂದಿದ್ದು, ಅವರಿಗೆ ಎಸ್‌ಡಿಎಂಸಿ ಆಡಳಿತ ಮಂಡಳಿಯಿಂದ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಅಕ್ವಾಫೋನಿಕ್ಸ್, ನಾನಾ ಸೆನ್ಸಾರ್ ಮಾದರಿಗಳು, ರಾಸಾಯನಿಕಗಳಿಂದ ಆರೋಗ್ಯದ ಮೇಲುಂಟಾಗುವ ಪರಿಣಾಮ, ರೇಡಾರ್‌ಗಳ ಬಳಕೆ, ವನ್ಯಜೀವಿಗಳ ಸಂರಕ್ಷಣೆ, ಭೂಮಿಯ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ, ಪರಿಸರ ಮಾಲಿನ್ಯ ನಿರ್ವಹಣೆ ಮತ್ತು ನಿಯಂತ್ರಣ, ಪೌಷ್ಟಿಕ ಆಹಾರ, ತ್ಯಾಜ್ಯವಸ್ತುಗಳ ನಿರ್ವಹಣೆ ಮತ್ತು ಪುನರ್ ಬಳಕೆ, ನೀರಿನ ಸಂರಕ್ಷಣೆ, ರಾಕೆಟ್ ಉಡಾವಣೆ, ಉಪಗ್ರಹ ನಿಯಂತ್ರಣ, ಮಾನವನ ಶರೀರ ರಚನೆ, ಆಹಾರ ಪಿರಮಿಡ್ , ಹಗಲು ಹಾಗೂ ರಾತ್ರಿ ಉಂಟಾಗುವಿಕೆ, ಮುಂತಾದ ವೈಜ್ಞನಿಕ ವೈಜ್ಞಾನಿಕ ಆವಿಷ್ಕಾರಗಳನ್ನು ವಿದ್ಯಾರ್ಥಿಗಳು ತಿಳಿಸಿಕೊಟ್ಟರು.

ಕಾರ್ಯಕ್ರಮಲ್ಲಿ ಮುಖ್ಯ ಶಿಕ್ಷಕ ಶಿವರಾಜು, ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಇದ್ದರು.

PREV

Recommended Stories

ನಿರಂತರ ಸಾಧನೆಯಿಂದ ಯಶಸ್ಸುಸಾಧ್ಯ
15ರಂದು ಬೆಂಗಳೂರಿಗೆ ಎಸ್‌ಪಿ ವರಿಷ್ಠ ಅಖಿಲೇಶ ಯಾದವ್