ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಅವರು ಇಲ್ಲಿನ ಚೇರ್ಕಾಡಿ ಶಾರದಾ ಆಂಗ್ಲ ಮಾಧ್ಯಮ ಶಾಲಾ ವಾಷಿ೯ಕೇೂತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಬಿ. ಮಹಾಬಲೇಶ್ವರ ಉಡುಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಶಾರದಾ ಹೈಸ್ಕೂಲು ಮುಖ್ಯಸ್ಥ ಸಿ. ಮಂಜುನಾಥ್ ನಾಯ್ಕ ಭಾಗವಹಿಸಿದ್ದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್. ಸುದರ್ಶನ ಹೆಗ್ಡೆ ಸ್ವಾಗತಿಸಿ ಪ್ರಾಸ್ತಾವನೆಗೈದರು. ಸಮಿತಿಯ ಕೇೂಶಾಧಿಕಾರಿ ಶಶಿಧರ್ ಶೆಟ್ಟಿ, ಆಡಳಿತಾಧಿಕಾರಿ ದಿನಕರ್ ಆರ್. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಶಾಲಾ ಮುಖ್ಯೇೂಪಾಧ್ಯಾಯಿನಿ ಚೈತ್ರಾ ಎಂ. ಶೆಟ್ಟಿ ಶಾಲಾ ವರದಿ ವಾಚಿಸಿದರು. ಶಾಲಾ ಆಡಳಿತ ಸಮಿತಿ ಉಪಾಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ ವಂದಿಸಿದರು. ವಿವಿಧ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಯಕ್ಷಗಾನ ರಂಗದಲ್ಲಿ ವಿಶೇಷ ಸಾಧನಗೈದ ಪ್ರಶಸ್ತಿ ಪುರಸ್ಕೃತ ಚೇರ್ಕಾಡಿ ಮಂಜುನಾಥ ಪ್ರಭು ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.