ದೇಶದ ಆಡಳಿತ ವ್ಯವಸ್ಥೆ ವಿದ್ಯಾರ್ಥಿಗಳಿಗೆ ತಿಳಿಸಬೇಕು-ಶಾಸಕ ಸಿ.ಸಿ. ಪಾಟೀಲ

KannadaprabhaNewsNetwork |  
Published : Jul 16, 2025, 12:45 AM IST
(16ಎನ್.ಆರ್.ಡಿ3 ಸಾಂಸ್ಕೃತಿಕ, ವಿಜ್ಞಾನ, ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಶಾಸಕ ಸಿ.ಸಿ.ಪಾಟೀಲ ಮಾತನಾಡಿದರು.) | Kannada Prabha

ಸಾರಾಂಶ

ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೋಧಿಸಲು ಮುಂದಾಗಬೇಕೆಂದು ಲಯನ್ಸ್‌ ಶಿಕ್ಷಣ ಸಂಸ್ಥೆ ಚೇರಮನ್‌, ಶಾಸಕ ಸಿ.ಸಿ. ಪಾಟೀಲ ಹೇಳಿದರು.

ನರಗುಂದ: ದೇಶದ ಆಡಳಿತ ವ್ಯವಸ್ಥೆ ಮಕ್ಕಳಿಗೆ ತಿಳಿಯಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಮಾದರಿ ಪರಿಚಯಿಸಬೇಕು. ಶಿಕ್ಷಕರು ಶಾಲಾ ಹಂತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬೋಧಿಸಲು ಮುಂದಾಗಬೇಕೆಂದು ಲಯನ್ಸ್‌ ಶಿಕ್ಷಣ ಸಂಸ್ಥೆ ಚೇರಮನ್‌, ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಅವರು ಪಟ್ಟಣದ ಲಯನ್ಸ್‌ ಶಿಕ್ಷಣ ಸಂಸ್ಥೆಯ ಲಯನ್ಸ್‌ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ, ವಿಜ್ಞಾನ, ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್‌ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಮ್ಮ ದೇಶ, ರಾಜ್ಯವು ಮಾದರಿಯಾದ ಆಡಳಿತ ವ್ಯವಸ್ಥೆ ಹೊಂದಿದೆ. ಅದು ಮಕ್ಕಳಿಗೆ ತಿಳಿಯಬೇಕಿದೆ. ಅವರಿಗೆ ಹಕ್ಕುಗಳ ಹಾಗೂ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ, ನಾಯಕರಾಗಿ ಬೆಳೆಯಲು ಸಾಧ್ಯವಾಗುತ್ತದೆ. ವ್ಯಕ್ತಿತ್ವ ನಿರ್ಮಾಣಕ್ಕೆ ಸರ್ವತೋಮುಖ ಬೆಳವಣಿಗೆ ಅಗತ್ಯವಿದೆ. ಸಾಂಸ್ಕೃತಿಕ, ವಿಜ್ಞಾನ ಚಟುವಟಿಕೆಗಳನ್ನು ಪಠ್ಯದ ಜೊತೆಗೆ ಸಮರ್ಥವಾಗಿ ಬೋಧಿಸಬೇಕು. ಕ್ರೀಡಾಪಟುಗಳು ನಿರ್ಮಾಣಗೊಳ್ಳಬೇಕು. ಪಾಶ್ಚ್ಯಾತ್ಯ ಸಂಸ್ಕೃತಿಗೆ ಮಾರು ಹೋಗದೇ ನಮ್ಮ ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಗೌರವಿಸುವಂತಾಗಬೇಕು ಎಂದರು. ನಮ್ಮ ದೇಶಿ ಕಲೆಗಳಾದ ಜನಪದ ಸಂಸೃತಿ, ಯಕ್ಷಗಾನ, ದೇಶಿಯ ನೃತ್ಯಗಳನ್ನು ಮಕ್ಕಳಿಗೆ ಕಲಿಸಿ ಅವುಗಳಲ್ಲಿ ತೊಡಗುವಂತಾಗಬೇಕು ಎಂದರು. ಮಕ್ಕಳಿಗೆ ಸಾಂಸ್ಕೃತಿಕ, ವಿಜ್ಞಾನ, ಕ್ರೀಡಾ ಚಟುವಟಿಕೆಗಳಲ್ಲಿ ಸಂಪೂರ್ಣ ತೊಡಗಿಕೊಳ್ಳಲು ನಿರಂತರ ಪ್ರೋತ್ಸಾಹಿಸಬೇಕು. ಆಗ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಆದ್ದರಿಂದ ಶಿಕ್ಷಕರು ಇದರತ್ತ ಮುಂದಾಗಬೇಕೆಂದು ಹೇಳಿದರು.

ಲಯನ್ಸ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ. ಗುಡಿಸಾಗರ ಮಾತನಾಡಿ, ನೈತಿಕ ಮೌಲ್ಯಗಳಿಲ್ಲದ ಶಿಕ್ಷಣ ಅಪಾಯಕಾರಿಯಾಗಿದೆ. ಆದ್ದರಿಂದ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸಿಕೊಡಬೇಕಿದೆ. ಜಗತ್ತು ವಿಸ್ತಾರವಾಗಿ ಬೆಳೆಯುತ್ತಿದೆ. ಜಗತ್ತನ್ನು ಬದಲಾಯಿಸಲುವ ಶ್ರೇಷ್ಠ ಸಮರ್ಥ ಆಯುಧ ಶಿಕ್ಷಣವಾಗಿದೆ. ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ಕಷ್ಟ ಪಟ್ಟು ಶಿಕ್ಷಣ ಪಡೆಯಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮೀಸಲಾಗಿರದೇ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿಜ್ಞಾನ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಇದರಿಂದ ಮಾತ್ರ ದೈಹಿಕ, ಮಾನಸಿಕ ಸಬಲರಾಗಿ ಸರ್ವತೋಮುಖ ವ್ಯಕ್ತಿತ್ವ ಹೊಂದಲು ಸಾಧ್ಯ. ಪ್ರತಿಯೊಬ್ಬರು ಶಿಸ್ತು, ಸಹನೆ, ಶಾಂತಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಅದನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಕರಿಂದ ನಡೆಯಬೇಕು ಎಂದರು. ನಮ್ಮ ಸಂಸ್ಕೃತಿ, ಪರಂಪರೆಯನ್ನು ಪರಿಚಯಿಸಬೇಕು. ವ್ಯಸನಮುಕ್ತರಾಗಿ ತಂದೆ, ತಾಯಿ ಹಾಗೂ ಗುರುಗಳನ್ನು ಗೌರವಿಸಬೇಕು. ನೆಮ್ಮದಿಯಿಂದ ಜೀವನ ನಡೆಸಲು ದೇವರನ್ನು ನಂಬಬೇಕು. ಸಮಯಪ್ರಜ್ಞೆ ಹಾಗೂ ಕರ್ತವ್ಯಪ್ರಜ್ಞೆ ಎಲ್ಲರಲ್ಲೂ ಬರಬೇಕು ಎಂದರು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಗಳಾಗಿ ಪ್ರಿತಂ ಪಟ್ಟಣಶೆಟ್ಟಿ, ಕ್ರೀಡಾ ಮಂತ್ರಿಗಳಾಗಿ ಪವನ ಅರ್ಕಸಾಲಿ, ಸಾಂಸ್ಕೃತಿಕ ಮಂತ್ರಿಗಳಾಗಿ ಈಶ್ವರಪ್ಪ ಹೂಗಾರ, ಶಿಸ್ತುಮಂತ್ರಿಗಳಾಗಿ ತೇಜಶ್ವಿನಿ ಕೋಟಿ, ಶಿಕ್ಷಣ ಮಂತ್ರಿಗಳಾಗಿ ಮಣಿಕಂಠ ಆನೇಗುಂದಿ, ಆರೋಗ್ಯ ಮಂತ್ರಿಗಳಾಗಿ ಗೋವಿಂದಸಿಂಗ್‌ ‌ರಾಥೋಡ, ಪ್ರವಾಸ ಮಂತ್ರಿಗಳಾಗಿ ಸುಜೀತ ರಾಮದುರ್ಗ, ಹಣಕಾಸು ಮಂತ್ರಿಗಳಾಗಿ ಸುಜಯ ಕುಲಕರ್ಣಿ ಪ್ರಮಾಣ ವಚನ ಸ್ವೀಕರಿಸಿದರು.

ನಿರ್ದೇಶಕ ಜಿ.ಬಿ. ಕುಲಕರ್ಣಿ ನೂತನ ಸಂಸತ್‌ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ತನುಜಾ ಪಾಟೀಲ ವಿವಿಧ ಸಮಿತಿಗಳನ್ನು ಪರಿಚಯಿಸಿದರು. ಇದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಲಾ ಸಂಸತ ಸದಸ್ಯರಿಗೆ ಶಾಸಕರು ಬ್ಯಾಚ್ ತೊಡಿಸಿ ಗೌರವಿಸಿದರು. ವೇದಿಕೆಯಲ್ಲಿ ಲಯನ್ಸ್‌ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಜಿ.ಬಿ.ಕುಲಕರ್ಣಿ, ಸಿ.ಎಸ್‌.ಸಾಲೂಟಗಿಮಠ, ವಿಜಯಕುಮಾರ ಬೇಲೇರಿ, ಕೋ ಆರ್ಡಿನೇಟರ್‌ ಪ್ರೇರಣಾ ಪಾತ್ರಾ ಇದ್ದರು. ಮುಖ್ಯೋಪಾಧ್ಯಾಯ ಜಿ.ಬಿ. ಹಿರೇಮಠ ಸ್ವಾಗತಿಸಿದರು. ಸೌಜನ್ಯ ನೇಸರಗಿ ಕಾರ್ಯಕ್ರಮ ನಿರೂಪಿಸಿದರು. ತನುಜಾ ಕವಲೂರು ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು