ವಿದ್ಯಾರ್ಥಿಗಳು ಸಮಯಪಾಲನೆ, ಶಿಸ್ತು ರೂಢಿಸಿಕೊಳ್ಳಿ: ಶ್ರೀ

KannadaprabhaNewsNetwork |  
Published : Jan 25, 2026, 01:30 AM IST
ಪೋಟೋ 5 : ದಾಬಸ್‍ಪೇಟೆ ಪಟ್ಟಣದ ಗೀತಾ ಆಂಗ್ಲಶಾಲೆಯಲ್ಲಿ ನಡೆದ ಶಾಲಾ ಹಂತದ ಕ್ರೀಡಾಕೂಟವನ್ನು ಮೇಲಣಗವಿ ಮಠದ ಡಾ.ಶ್ರೀಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ. ಸೋಲನ್ನು ಮೆಟ್ಟಿ ನಿಂತಾಗ ಮಾತ್ರ ಗೆಲುವನ್ನು ಸಾಧಿಸಬಹುದೆಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ದಾಬಸ್‍ಪೇಟೆ: ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ. ಸೋಲನ್ನು ಮೆಟ್ಟಿ ನಿಂತಾಗ ಮಾತ್ರ ಗೆಲುವನ್ನು ಸಾಧಿಸಬಹುದೆಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಗೀತಾ ಆಂಗ್ಲಶಾಲೆಯಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸಮಯ ತುಂಬಾ ಅಮೂಲ್ಯವಾದುದು. ತಂದೆ ತಾಯಿಗಳೇ ಮೊದಲ ದೇವರು. ಮನೆಯೇ ಮೊದಲ ಪಾಠಶಾಲೆ. ಗುರುಗಳು ವಿದ್ಯಾರ್ಥಿಗಳಿಗೆ ದೇವರ ಸಮಾನ, ಶಾಲೆ ಒಂದು ದೇವಾಲಯ ಇದ್ದಂತೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಮಯ ಪಾಲನೆ, ಶಿಸ್ತು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.

ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಸುನಿತಾ ಮಾತನಾಡಿ, ಕ್ರೀಡೆಗಳು ಕೇವಲ ಮನರಂಜನೆಗಷ್ಟೇ ಸೀಮಿತವಾಗಿಲ್ಲ. ಅವು ದೈಹಿಕ ಸದೃಢತೆಗೂ ಪೂರಕ. ವಿದ್ಯಾರ್ಥಿಗಳು ಓದಿನಲ್ಲಿ ಉತ್ತಮ ಅಂಕ ಗಳಿಸುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕಂತಿಕ ಚಟುವಟಿಕೆಯಲ್ಲಿಯೂ ಪ್ರತಿಭೆ ತೋರಬೇಕು. ಈ ನಿಟ್ಟಿನಲ್ಲಿ ನಮ್ಮ ಶಾಲಾ ಪೋಷಕರಿಗೂ ಕ್ರೀಡಾಕೂಟವನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕ್ರೀಡಾಕೂಟದ ವಿಜೇತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಕಿರಿಯ ವಿಭಾಗದ ಮುಖ್ಯಶಿಕ್ಷಕ ರುದ್ರೇಶ್, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಪೋಟೋ 5 : ದಾಬಸ್‍ಪೇಟೆ ಪಟ್ಟಣದ ಗೀತಾ ಆಂಗ್ಲಶಾಲೆಯ ಕ್ರೀಡಾಕೂಟವನ್ನು ಮೇಲಣಗವಿ ಮಠದ ಡಾ.ಶ್ರೀಮಲಯ ಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!