ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು: ಪಿ.ಜೆ.ಆಂಟೋನಿ ಕರೆ

KannadaprabhaNewsNetwork |  
Published : Nov 08, 2025, 01:45 AM IST
 ನರಸಿಂಹರಾಜಪುರ ಲಯನ್ಸ್ ಕ್ಲಬ್ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ  ಪೀಸ್ ಪೋಸ್ಟರ್ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಚಿತ್ರ  ಬರೆಯುವ ಪರಿಕರಗಳನ್ನು ವಿತರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ.ಆಂಟೋನಿ ಮತ್ತಿತರರು ಇದ್ದರು. | Kannada Prabha

ಸಾರಾಂಶ

ಭಾರತ ವಿವಿಧತೆಯಲ್ಲಿ ವೈವಿಧ್ಯತೆ ದೇಶವಾಗಿದ್ದು ಪ್ರತಿಯೊಬ್ಬ ಮಕ್ಕಳೂ ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.

ನರಸಿಂಹರಾಜಪುರ: ಭಾರತ ವಿವಿಧತೆಯಲ್ಲಿ ವೈವಿಧ್ಯತೆ ದೇಶವಾಗಿದ್ದು ಪ್ರತಿಯೊಬ್ಬ ಮಕ್ಕಳೂ ಮಾನವೀಯತೆ ಬೆಳೆಸಿಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಜೆ.ಆಂಟೋನಿ ತಿಳಿಸಿದರು.

ಮಂಗಳವಾರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 5 ಹಾಗೂ 6 ನೇ ತರಗತಿ ಮಕ್ಕಳಿಗಾಗಿ ನಡೆಸಿದ ಪೀಸ್ ಪೋಸ್ಟರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಬೇಕಾದರೆ ಮಕ್ಕಳು ಆರೋಗ್ಯವಂತರಾಗಿರಬೇಕು. ಮಕ್ಕಳಿಗೆ ಪೌಷ್ಠಿಕಾಂಶದ ಆಹಾರ ನೀಡಬೇಕು. ಮಕ್ಕಳು ಜ್ಞಾನವಂತರಾಗಬೇಕು. ಭಾಷೆ ಬೆಳವಣಿಗೆ ಆಗಬೇಕು. ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿರದೆ ಎಲ್ಲರೊಂದಿಗೆ ಹೊಂದಿಕೊಂಡು ಸಾಮರಸ್ಯ ದಿಂದ ಬಾಳಬೇಕು. ಯಾರೂ ಮಕ್ಕಳ ಭಾವನೆ ಕೆರಳಿಸುವ ಕೆಲಸ ಮಾಡಬಾರದು. ಭಾವನೆ ಅರಳಿಸುವ ಕೆಲಸ ಆಗಬೇಕಾಗಿದೆ. ಮಕ್ಕಳ ಮನಸ್ಸಿನಲ್ಲಿ ಹೊಳೆಯುವ ಸಾಮರಸ್ಯದ ಕಲ್ಪನೆ ಚಿತ್ರವಾಗಿ ಹೊರಬರಬೇಕು ಎಂದು ಕರೆ ನೀಡಿದರು.

ಲಯನ್ಸ್ ಕ್ಲಬ್ ರೀಸನ್ 15 ರ ರೀಜನಲ್ ಛೇರ್ಮನ್ ಸಿಜು ಮಾತನಾಡಿ, ಲಯನ್ಸ್ ಕ್ಲಬ್ ಇಂದು 200 ದೇಶಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಮಕ್ಕಳ ಪ್ರತಿಭೆ ಹೊರ ತರಬೇಕು ಎಂಬ ಉದ್ದೇಶದಿಂದ ಪ್ರತಿವರ್ಷ ಒಂದು ವಿಷಯದ ಥೀಮ್ ನೀಡಲಾಗುತ್ತದೆ. ಈ ವರ್ಷ ನಾವೆಲ್ಲರೂ ಒಗ್ಗೂಡಿ ಬಾಳೋಣ ಎಂಬ ವಿಷಯ ನೀಡಲಾಗಿದೆ.

ಈ ವಿಷಯ ಇಟ್ಟುಕೊಂಡು ಮಕ್ಕಳು ಚಿತ್ರ ಬರೆಯಬೇಕಾಗಿದೆ. ಆಯಾ ದೇಶದ ಲಯನ್ಸ್ ಕ್ಲಬ್ ಗಳು ಸ್ಥಳೀಯ ಶಾಲೆಗಳ 5,6,7 ನೇ ತರಗತಿ ಮಕ್ಕಳಿಗೆ ಚಿತ್ರ ಕಲೆಸ್ಪರ್ಧೆ ನಡೆಸುತ್ತದೆ. ನಮ್ಮ ದೇಶ, ರಾಜ್ಯ, ನಾವೆಲ್ಲರೂ ಒಂದು ಎಂಬುದು ಪೀಸ್ ಪೋಸ್ಟರ್ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.

ಸಭೆಯಲ್ಲಿ ಲಯನ್ಸ್ ಕ್ಲಬ್ ನ ರೀಜನ್- 15 ರ ಪ್ರಾಂತೀಯ ರಾಯಬಾರಿ ಎಂಪಿ ಸನ್ನಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೆ.ಟಿ.ಎಲ್ದೋ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಭಾರಿ ಪ್ರಾಂಶುಪಾಲ ವಿಶ್ವನಾಥ್, ಡ್ರಾಯಿಂಗ್ ಟೀಚರ್ ಜ್ಯೋತಿ ಇದ್ದರು. ಸಹ ಶಿಕ್ಷಕಿ ಸುಹಾಸಿನಿ ಸ್ವಾಗತಿಸಿದರು. ಸಹ ಶಿಕ್ಷಕಿ ಭಾನು ವಂದಿಸಿದರು.

PREV

Recommended Stories

ಬ್ರಾಹ್ಮಣ ಸಮುದಾಯಕ್ಕೆ ಸೌಲಭ್ಯ ನೀಡಲು ಬದ್ಧ : ಸಚಿವ ದಿನೇಶ್‌ ಗುಂಡೂರಾವ್‌
ಬೆಂಗಳೂರು ನಗರದ 6 ಆರ್‌ಟಿಒ ಕಚೇರಿ ಮೇಲೆ ದಾಳಿ: ಹಲವು ಅಕ್ರಮ ಪತ್ತೆ