ವಿದ್ಯಾರ್ಥಿಗಳು ಓದಿನೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು-ಮುಷ್ಠಿ

KannadaprabhaNewsNetwork |  
Published : Mar 19, 2024, 12:52 AM IST
೧೬ಎಚ್‌ವಿಆರ್೨- | Kannada Prabha

ಸಾರಾಂಶ

ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಜಾಸತ್ತಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಹೆತ್ತವರಿಗೆ ಹಾಗೂ ಸಮಾಜಕ್ಕೆ ಉತ್ತಮ ಆಸ್ತಿಯಾಗಲು ಸದಾ ಪ್ರಯತ್ನಶೀಲರಾಗಬೇಕು ಎಂದು ಹುಕ್ಕೇರಿಮಠ ಜ. ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಹೇಳಿದರು.

ಹಾವೇರಿ: ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಜಾಸತ್ತಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಹೆತ್ತವರಿಗೆ ಹಾಗೂ ಸಮಾಜಕ್ಕೆ ಉತ್ತಮ ಆಸ್ತಿಯಾಗಲು ಸದಾ ಪ್ರಯತ್ನಶೀಲರಾಗಬೇಕು ಎಂದು ಹುಕ್ಕೇರಿಮಠ ಜ. ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಹೇಳಿದರು.

ನಗರದ ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆಯ ಸುವರ್ಣ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕತೆ ಬೆಳೆದಂತೆ, ಶಿಕ್ಷಣದ ಪರಿಭಾಷೆಯು ಬದಲಾಗುತ್ತಿದೆ. ಗುರು ಶಿಷ್ಯ ಸಂಬಂಧವು ಕೇವಲ ವ್ಯವಹಾರಿಕವಾಗಿದೆ. ಇಂಥಹ ಪರಿಸ್ಥಿತಿಯಲ್ಲೂ ಉತ್ತಮ ಶಿಷ್ಯ ಬಳಗ ಹಾಗೂ ಸಮರ್ಪಣಾಭಾವದ ಶಿಕ್ಷಕರು ಜೊತೆಯಾಗಿ ಶಾಲೆಯನ್ನು ಸರ್ವತೋಮುಖವಾಗಿ ಬೆಳೆಸಿದಾಗ ಅದು ಮುಂದಿನ ತಲೆಮಾರಿನ ಸಮಾಜದ ಉತ್ತಮ ಅಡಿಪಾಯವಾಗುತ್ತದೆ. ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಅಂಥಹ ಗುರುಶಿಷ್ಯ ಸಂಬಂಧವು ನಮ್ಮಲ್ಲಿ ಕಾಣುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಸಹಾಯ ಸಂಘದ ವಲಯ ಮುಖ್ಯಸ್ಥೆ ವಿಜಯಶ್ರೀ ಮಾತನಾಡಿ, ಇಂದು ಶಿಕ್ಷಣವು ವ್ಯಾಪಾರೀಕರಣವಾಗಿದೆ. ವಿದ್ಯಾರ್ಥಿಯ ಬುದ್ಧಿಶಕ್ತಿಯನ್ನು ಕೇವಲ ಅಂಕಗಳಿಂದ ಅಳೆಯಲಾಗುತ್ತಿದೆ. ವಿದ್ಯಾರ್ಥಿಗಳು ಸತತ ಪರಿಶ್ರಮ, ತಾಳ್ಮೆಯಿಂದ ಅಧ್ಯಯನಶೀಲರಾಗಿ ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಪ್ರಯತ್ನಿಸಿ, ಯಶಸ್ಸಿಗೆ ಅಡ್ಡದಾರಿಗಳಿಲ್ಲ. ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಹೋದವರ ಮೊದಲ ಲಕ್ಷಣವೇ ಪರಿಶ್ರಮವಾಗಿದೆ ಎಂದು ಹೇಳಿದರು.

ಪ್ರಾಚಾರ್ಯರಾದ ಎಸ್.ವಿ. ಹಿರೇಮಠ ಮಾತನಾಡಿ, ಇಂದು ವಿದ್ಯಾರ್ಥಿಗಳಾಗಿದ್ದು, ಮುಂದೆ ಜೀವನದಲ್ಲಿ ಸಾಧಕರಾಗಿ, ಸಾಧನೆಯ ನಂತರ ಕಲಿತ ಶಾಲೆ ಹಾಗೂ ಕಲಿಸಿದ ಶಿಕ್ಷಕರನ್ನು ಎಂದೂ ಮರಿಯಬೇಡಿರಿ. ನನ್ನ ಶಾಲೆ ನನ್ನ ಹೆಮ್ಮೆ ಎನ್ನುವದು ನಮ್ಮ ಧ್ಯೇಯವಾಗಬೇಕು.ಶಾಲೆಯ ಅಭಿವೃದ್ಧಿಗೆ ಕೈಲಾದ ಸಹಕಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.

ವಿದ್ಯಾರ್ಥಿಗಳ ಪರವಾಗಿ ಭಾವನಾ ಬಡಿಗೇರ, ರಕ್ಷಿತಾ ಕಡೇಮನಿ, ಸೌಮ್ಯ ಹಿರೇಗೌಡರ, ರಂಜಿತಾ ಪಾಟೀಲ ಅನಿಸಿಕೆ ವ್ಯಕ್ತಪಡಿಸಿದರು. ಗೀತಾಂಜಲಿ ಹಿರೇಮಠ ಕವನ ವಾಚನ ಮಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಡೆಸ್ಕಗಳನ್ನು ಹಾಗೂ ನಾಮಫಲಕವನ್ನು ಕೊಡುಗೆಯಾಗಿ ನೀಡಿದರು.

ಪ್ರಾಚಾರ್ಯ ಎಸ್.ಬಿ. ಅಣ್ಣಿಗೇರಿ, ಎಸ್.ಎನ್.ಮಳೆಪ್ಪನವರ, ಎಸ್. ಸಿ.ಮರಳಿಹಳ್ಳಿ ಮಾತನಾಡಿದರು. ಮುಖ್ಯೋಪಾಧ್ಯಾಯನಿ ಚನ್ನಮ್ಮ ಅಂತರವಳ್ಳಿ ಅಧ್ಯಕ್ಷತೆ ವಹಿಸಿದ್ದರು. ವಿನಯ ಬನ್ನಿಹಳ್ಳಿ, ಶೋಭಾ ನಾಶೀಪುರ, ರೂಪಾ ಟಿ.ಆರ್. ಲೀಲಾವತಿ ಅಂದಾನಿಮಠ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಪ್ರದಾಯ ತಿರಸ್ಕರಿಸದಿದ್ರೆ ಪ್ರಗತಿಶೀಲತೆ ಪ್ರಬಲವಾಗದು
ಸೋಮಾರಿಗಳಾಗದೆ ಕ್ರಿಯಾಶೀಲರಾಗಲಿ