ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಿ: ಬೇಬಿ ಮ್ಯಾಥ್ಯೂ ಕರೆ

KannadaprabhaNewsNetwork |  
Published : Oct 31, 2025, 03:00 AM IST
ಚಿತ್ರ :  26ಎಂಡಿಕೆ2 : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿದರು.  | Kannada Prabha

ಸಾರಾಂಶ

ಸೌಟ್ಸ್‌, ಗೈಡ್ಸ್‌, ಬುಲ್‌ ಬುಲ್‌, ರೇಂಜರ್ಸ್‌ ಮತ್ತು ರೋವರ್‌ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆ ವತಿಯಿಂದ ಮಡಿಕೇರಿ ನಗರದಲ್ಲಿರುವ ಸಂಸ್ಥೆಯ ಸ್ಕೌಟ್ಸ್, ಗೈಡ್ಸ್‌ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಭಾನುವಾರ ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್, ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗಾಗಿ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.

ಗೀತಾ ಗಾಯನ ಸ್ಪರ್ಧೆಯ ಉದ್ಘಾಟನಾ ಸಮಾರಂಭದ‌ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಭ್ರಾತೃತ್ವ, ರಾಷ್ಟ್ರೀಯ ಪ್ರಜ್ಞೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವ ಉದ್ದೇಶದಿಂದ ದೇಶಭಕ್ತಿ ಗೀತೆಯಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಮಡಿಕೇರಿಯಲ್ಲಿ ನ.23ರಂದು ಮೈಸೂರು ವಿಭಾಗಮಟ್ಟದ ಗೀತಾ ಗಾಯನ ಸ್ಪರ್ಧೆಯು ನಡೆಯಲಿದ್ದು, ಎಂಟು ಜಿಲ್ಲೆಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ ಮಾತನಾಡಿ, ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ಅಗಾಧ ದೇಶಪ್ರೇಮ ಮೂಡುತ್ತದೆ. ನಾಡಿನ ಬಗ್ಗೆ ಅಭಿಮಾನ ಉಂಟು ಮಾಡುತ್ತದೆ ಎಂದರು.

ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದು ಹೇಳಿದರು.

ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ.ಉಷಾರಾಣಿ ಮಾತನಾಡಿ, ಇದು‌ ಮಕ್ಕಳು ಭವಿಷ್ಯದಲ್ಲಿ ತಮ್ಮನ್ನು ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.

ವಿದ್ಯಾರ್ಥಿ ಪೋಷಕರಾದ ಶ್ರೀಲತಾ, ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಜಿಲ್ಲಾ ಗೈಡ್ಸ್ ತರಬೇತಿ ಆಯುಕ್ತೆ ಮೈಥಿಲಿ ರಾವ್, ಜಿಲ್ಲಾ ಬುಲ್ ಬುಲ್ ಆಯುಕ್ತೆ ಡೈಸಿ ಫ್ರಾನ್ಸಿಸ್, ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಎಂ.ವಸಂತಿ, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಕಮೀಷನರ್ ತರಬೇತುದಾರ ಕೆ.ಬಿ.ಗಣೇಶ್, ತೀರ್ಪುಗಾರರಾದ ಲಕ್ಷ್ಮೀ ಈಶ್ವರ್ ಭಟ್, ವೀಣಾ ಹೊಳ್ಳ, ಗೈಡ್ಸ್ ಶಿಕ್ಷಕಿ ಬಿ.ಜಿ.ಜಾಜಿ, ಸ್ಕೌಟ್ಸ್, ಗೈಡ್ಸ್ ಶಿಕ್ಷಕರು, ಶಿಕ್ಷಕಿಯರು, ಸ್ಕೌಟ್ಸ್, ಗೈಡ್ಸ್, ಬುಲ್ ಬುಲ್, ರೇಂಜರ್ ಮತ್ತು ರೋವರ್ಸ್ ವಿದ್ಯಾರ್ಥಿಗಳು, ಪೋಷಕರು ಇದ್ದರು.

ಜಿಲ್ಲೆಯ ಪ್ರತಿ ತಾಲೂಕುಗಳಿಂದ‌ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿದ್ದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''