ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಿ

KannadaprabhaNewsNetwork |  
Published : May 30, 2026, 01:45 AM IST
ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ   ಇಸಿಇ, ಇಇಇ, ಮೆಕ್ಯಾನಿಕಲ್ ಹಾಗೂ ಸಿವಿಲ್ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ 2026” ಕಾರ್ಯಕ್ರಮ ದಲ್ಲಿ ತುಮಕೂರು ನಗರ ಶಾಸಕ ಹಾಗೂ ಸಿಐಟಿ ಸಂಸ್ಥೆಯ ಕಾರ್ಯದರ್ಶಿ  ಜಿ ಬಿ ಜ್ಯೋತಿ ಗಣೇಶ್. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕಷ್ಟೇ ಸೀಮಿತವಾಗದೆ, ಸಮಾಜಮುಖಿ ಚಿಂತನೆ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ತುಮಕೂರು ನಗರ ಶಾಸಕ ಹಾಗೂ ಸಿಐಟಿ ಸಂಸ್ಥೆಯ ಕಾರ್ಯದರ್ಶಿ ಜಿ ಬಿ ಜ್ಯೋತಿ ಗಣೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವುದಕ್ಕಷ್ಟೇ ಸೀಮಿತವಾಗದೆ, ಸಮಾಜಮುಖಿ ಚಿಂತನೆ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ತುಮಕೂರು ನಗರ ಶಾಸಕ ಹಾಗೂ ಸಿಐಟಿ ಸಂಸ್ಥೆಯ ಕಾರ್ಯದರ್ಶಿ ಜಿ ಬಿ ಜ್ಯೋತಿ ಗಣೇಶ್ ಹೇಳಿದರು. ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಸಿಇ, ಇಇಇ, ಮೆಕ್ಯಾನಿಕಲ್ ಹಾಗೂ ಸಿವಿಲ್ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ 2026 ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು. ಸುಮಾರು 25 ವರ್ಷಗಳ ಹಿಂದೆ ಆರಂಭವಾಗಿರುವಂತಹ ಸಂಸ್ಥೆ 13000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಓದಿ ದೇಶ, ವಿದೇಶಗಳಲ್ಲಿ ಕೆಲಸ ಮಾಡುತ್ತಿರುವುದು ಒಂದು ಕಡೆಯಾದರೆ, ತಮ್ಮದೇ ಆದಂತಹ ಕಂಪನಿಗಳನ್ನು ಹುಟ್ಟುಹಾಕಿ ಅಲ್ಲಿ ಇತರರಿಗೂ ಉದ್ಯೋಗವನ್ನು ನೀಡುವಂತಹ ಕೆಲಸವನ್ನು ಮಾಡುತ್ತಿರುವುದು ಹೆಚ್ಚು ಖುಷಿ ನೀಡಿದೆ ಎಂದರು.

ಮುಖ್ಯ ಅತಿಥಿಯಾಗಿ ಬೆಂಗಳೂರಿನ ನೈಷಾ ಮೊಬಿಲಿಟಿ ಟೆಕ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷ ಅತಿಶಯ್ ಜೈನ್ ಮಾತನಾಡಿ, ತಾಂತ್ರಿಕ ಜ್ಞಾನ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ನಿರಂತರ ಕಲಿಕೆಯ ಮನೋಭಾವ ಅಗತ್ಯವಿದ್ದು ಜಾಗತಿಕ ಮಟ್ಟದಲ್ಲಿ ಭಾರತೀಯ ಎಂಜಿನಿಯರ್‌ಗಳಿಗೆ ಹೆಚ್ಚಿನ ಅವಕಾಶಗಳಿದ್ದು, ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಲುಫ್ತಾನ್ಸಾ ಸಿಸ್ಟಮ್ಸ್‌ನ ಕಿರಣ್ ಆಡಿ ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಇತ್ತೀಚಿಗೆ ಕೃತಕ ಬುದ್ಧಿಮತ್ತೆ ಸಾಕಷ್ಟು ಅಭಿವೃದ್ಧಿಯತ್ತ ಸಾಗುತ್ತಿತ್ತು ಇದರ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಬೇಕಾಗಿದೆ. ಇನ್ನೂ ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಡಿಜಿಟಲ್ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನ ಜೊತೆಗೆ ನಾಯಕತ್ವ ಗುಣ, ತಂಡ ಕಾರ್ಯಪಟುತ್ವ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಿ.ಐ.ಟಿ ಸಂಸ್ಥೆಯ ನಿರ್ದೇಶಕ ಹಾಗೂ ಪ್ರಾಂಶುಪಾಲ ಡಾ. ಸುರೇಶ್ ಡಿ. ಎಸ್. ಮಾತನಾಡಿ, ಇಂದು ವಿದೇಶಗಳಲ್ಲಿಯೂ ಸಹ ನಮ್ಮ ವಿದ್ಯಾರ್ಥಿಗಳು ತಮ್ಮದೇ ಆದ ಸ್ವಂತ ಸಂಸ್ಥೆಗಳನ್ನು ಕಟ್ಟಿಕೊಂಡಿರುವುದು ನಿಜವಾಗಿಯೂ ಮತ್ತಷ್ಟು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಸಲಹೆಗಾರ ಡಾ. ಶ್ರೀಧರ್ ಕೆ. ಎನ್. ರಾವ್ ಹಾಗೂ ಉಪಪ್ರಾಂಶುಪಾಲರಾದ ಡಾ. ಶಾಂತಲಾ ಸಿಪಿ,ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಿಷ್ಠ ವೇತನ ಕರಡು ಅಧಿಸೂಚನೆಗೆ ವಿರೋಧ
ಮನುಷ್ಯನ ಸಂಸ್ಕಾರ ತಿದ್ದಿ ತೀಡಲು ಪುಸ್ತಕ ಸಹಕಾರಿ: ಮ.ನಿ.ಪ್ರ. ಮಹಾಂತ ಸ್ವಾಮೀಜಿ