ಗದಗ: ವಿದ್ಯಾರ್ಥಿಗಳ ವೃತ್ತಿಜೀವನ ನಿರ್ಮಾಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಉದ್ಯಮ ಕ್ಷೇತ್ರದ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಾಂತ್ರಿಕ ಜ್ಞಾನ, ಸಂವಹನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದು ಆರ್.ಟಿ.ಇ. ಸೊಸೈಟಿಯ ಗೌರವ ಕಾರ್ಯದರ್ಶಿ ಸಚಿನ್ ಡಿ. ಪಾಟೀಲ ತಿಳಿಸಿದರು.
ಪ್ರಾಂಶುಪಾಲ ಡಾ. ಬಿ.ಎನ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸಲು ಕಾಲೇಜು ನಿರಂತರವಾಗಿ ಕೌಶಲ್ಯಾಭಿವೃದ್ಧಿ ಮತ್ತು ಕೈಗಾರಿಕಾ ಸಹಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಈ ವೇಳೆ ಆಡಳಿತಾಧಿಕಾರಿ ಡಾ. ವಿ.ಎಂ. ಪಾಟೀಲ, ಡಾ. ಭಾರ್ಗವ್ ಎಚ್.ಕೆ. ಸೇರಿದಂತೆ ಅಧ್ಯಾಪಕರು, ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಚಂದ್ರಕಾಂತ ವಟವಟಿ ಸ್ವಾಗತಿಸಿದರು. ವಿದ್ಯಾರ್ಥಿನಿ ತೇಜಸ್ವಿನಿ ಬಡಿಗೇರ ಪ್ರಾರ್ಥಿಸಿದರು. ಪ್ರೊ. ಜಗದೀಶ್.ಎಂ ನಿರೂಪಿಸಿದರು.