ಕನ್ನಡಪ್ರಭ ವಾರ್ತೆ ಉಡುಪಿ
ಶುಕ್ರವಾರ ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪಠ್ಯಕ್ರಮಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವಂತಹ ಮಕ್ಕಳುಗಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕು ಎಂದರು.ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ. 97 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿ ಇತ್ತು. ಈ ಬಾರಿಯೂ ಪರೀಕ್ಷಾ ಫಲಿತಾಂಶದಲ್ಲಿ ಶೇಕಡಾವಾರು ಪ್ರಮಾಣ ಕಳೆದ ಬಾರಿಗಿಂತ ಹೆಚ್ಚು ಪಡೆದು ಪ್ರಥಮ ಸ್ಥಾನವನ್ನು ಪಡೆಯಲು ಪರಿಣಾಮಕಾರಿಯಾಗಿ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಸೈಂಟ್ ಸಿಸಿಲೀಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಮತ್ತಿತರರು ಇದ್ದರು.