ಕನ್ನಡಪ್ರಭ ವಾರ್ತೆ ಉಳ್ಳಾಲ
ಅವರು ಕೊಣಾಜೆಯ ಕಲ್ಲಿಮಾರು ಬಳಿಯ ಕೆಳಗಿನ ಮನೆ ಗದ್ದೆಯಲ್ಲಿ ಮಂಗಳ ಗ್ರಾಮೀಣ ಯುವಕ ಸಂಘ (ರಿ) ಕೊಣಾಜೆ, ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ ಹಾಗೂ ನಾಗಬ್ರಹ್ಮ ಪ್ರಗತಿಪರ ಸ್ವಸಹಾಯ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಗುರುವಾರ ನಡೆದ ಕೊಣಾಜೆ ಪದವು ಸರ್ಕಾರಿ ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ವಿದ್ಯಾರ್ಥಿಗಳ ಜಾನಪದ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ, ಕೊಣಾಜೆ ಪಂಚಾಯಿತಿ ಮಾಜಿ ಅಧ್ಯಕ್ಷ ಅಚ್ಯುತ ಗಟ್ಟಿ, ಇತ್ತೀಚಿನ ದಿನಗಳಲ್ಲಿ ಭತ್ತದ ಗದ್ದೆಗಳು ಹಡಿಲು ಬೀಳುತ್ತಿದ್ದು, ಹೆಚ್ಚಿನ ಗದ್ದೆಗಳು ತೋಟಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು, ಯುವ ಸಮುದಾಯ ಕೃಷಿಯ ಮಹತ್ವವನ್ನು ಅರಿತುಕೊಂಡು ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸಬೇಕು ಎಂದರು.ಕಾರ್ಯಕ್ರಮವನ್ನು ಹಿರಿಯ ಕೃಷಿಕೆ, ಮಾಜಿ ಪಂಚಾಯಿತಿ ಸದಸ್ಯೆ ಮುತ್ತು ಶೆಟ್ಟಿ ಅವರ ಪಾಡ್ದನದ ಮೂಲಕ ಆರಂಭಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪಾಡ್ದನ, ತುಳುನಾಡಿನ ಕೃಷಿ ಸಂಸ್ಕೃತಿಯ ಬಗ್ಗೆ, ಕೃಷಿಕರ ಪರಿಶ್ರಮ ಹಾಗೂ ಕೃಷಿಯ ಮಹತ್ವದ ಬಗ್ಗೆ ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರ್ ವಿವರಿಸಿದರು.
ಕಾರ್ಯಕ್ರಮ ಸಂಘಟಕರಾದ ಅಚ್ಯುತ ಗಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಪ್ರೌಢಶಾಲೆ ಕೊಣಾಜೆಪದವು ಮತ್ತು ದ.ಕ. ಜಿಲ್ಲಾ ಪಂ. ಹಿರಿಯ ಪ್ರಾಥಮಿಕ ಶಾಲೆ ಕೊಣಾಜೆ ಪದವು ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಗದ್ದೆಗಿಳಿದು ಕ್ರೀಡಾಕೂಟದಲ್ಲಿ ತೊಡಗಿಸಿಕೊಂಡರು.