ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರ ಸಮೀಪದ ಶ್ರೀ ಮುರುಘ ರಾಜೇಂದ್ರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೫- ೨೬ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲಿಕಾ ಸಂದರ್ಭ ವಿದ್ಯಾರ್ಥಿಗಳು ಈ ಎಲ್ಲಾ ಗುಣಗಳನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವ ಜೊತೆಗೆ ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಮೀರಿ ಬೆಳೆಯಲು ಸಾಧ್ಯ. ಈಗ ನೀವೆಲ್ಲರೂ ಓದುವ ಕಾಲವಾಗಿದೆ. ಈ ಅವಧಿಯಲ್ಲಿ ವಿದ್ಯಾಭ್ಯಾಸ ಕಡೆಗೆ ಮೊದಲ ಆದ್ಯತೆ ನೀಡಬೇಕು. ಈ ಹಂತದಲ್ಲಿ ಶ್ರದ್ಧೆ, ಆಸಕ್ತಿ ಮತ್ತು ಏಕಾಗ್ರತೆ ರೂಢಿಸಿಕೊಂಡರೆ, ಮುಂದಿನ ಜೀವನ ನಿಮ್ಮದಾಗುತ್ತದೆ. ಒಳ್ಳೆಯ ಫಲಿತಾಂಶ ಬರುತ್ತದೆ. ಸಾಧಿಸುವ ಛಲ ಮತ್ತಷ್ಟು ಇಮ್ಮಡಿಗೊಳ್ಳುತ್ತದೆ. ತಂದೆ, ತಾಯಿ, ಗುರುಗಳು ಹಾಗೂ ವಿದ್ಯಾಸಂಸ್ಥೆಯ ಕೀರ್ತಿ ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದರು.ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜಿ. ಕುಮಾರ ಸ್ವಾಮೀಜಿ ಮಾತನಾಡಿ, ಶ್ರೀಮಠದ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೀವು ಉತ್ತಮ ಫಲಿತಾಂಶ ಪಡೆಯುವುದರ ಜೊತೆಗೆ ಪ್ರತಿಭಾವಂತರಾಗಿ ಹೊರ ಬರುವ ಕಾಲ ಪಕ್ವವಾಗಿದೆ. ಪೋಷಕರ ಆಶಯವನ್ನು ಈಡೇರಿಸುವ ಮೂಲಕ ಉನ್ನತ ಸ್ಥಾನಗಳಿಗೆ ಹೋಗಬೇಕು ಎಂದರು.
ಕಾಲೇಜು ಶಿಕ್ಷಣ ವಿಭಾಗ ಉಪನಿರ್ದೇಶಕರಾದ ಎಚ್. ಎನ್. ಪುಟ್ಟಗೌರಮ್ಮ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಆಶೋಕ್, ಸಂಸ್ಕೃತ ಪಾಠಶಾಲಾ ಮುಖ್ಯ ಶಿಕ್ಷಕ ಕೆ.ಜಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತನುಶ್ರೀ, ಸ್ವಾಗತಿಸಿದರೆ, ಮಾನಸ ನಿರೂಪಿಸಿ, ಮಂಗಳ ವಂದನಾರ್ಪಣೆ ಮಾಡಿದರು. ಬಳಿಕ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.