ವಿದ್ಯಾರ್ಥಿಗಳು ಭಾರತ ದೇಶದ ಸಂವಿಧಾನ ಓದಬೇಕು: ಕೆ.ಎನ್‌. ಫಣೀಂದ್ರ

KannadaprabhaNewsNetwork |  
Published : Sep 25, 2025, 01:00 AM IST
ಚಿಕ್ಕಮಗಳೂರು ಸಮೀಪದ ಇಂದಾವರದಲ್ಲಿರುವ ನಗರಸಭೆಯ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಅಂಬೇಡ್ಕರ್‌ ರಚಿಸಿರುವ ಗ್ರಂಥಗಳು ಹಾಗೂ ಭಾರತ ದೇಶದ ಸಂವಿಧಾನವನ್ನು ಓದಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಕರೆ ನೀಡಿದರು.

ಚಿಕ್ಕಮಗಳೂರು: ವಿದ್ಯಾರ್ಥಿಗಳು ಅಂಬೇಡ್ಕರ್‌ ರಚಿಸಿರುವ ಗ್ರಂಥಗಳು ಹಾಗೂ ಭಾರತ ದೇಶದ ಸಂವಿಧಾನವನ್ನು ಓದಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಕರೆ ನೀಡಿದರು.

ವಿದ್ಯಾರ್ಥಿನಿಲಯಗಳಿಗೆ ಬುಧವಾರ ಭೇಟಿ ನೀಡಿ ಅಲ್ಲಿನ ನ್ಯೂನತೆಗಳ ಬಗ್ಗೆ ಪರಿಶೀಲಿಸಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸುವ ಜೊತೆಗೆ ಸ್ವಚ್ಛತೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿ ನಿಲಯವನ್ನು ನಮ್ಮ ಮನೆಯಂತೆ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಮದರ್ ಥೆರೆಸಾ ಫ್ಲಾರೆನ್ಸ್ ನೈಟಿಂಗೆಲ್, ಸ್ವಾಮಿ ವಿವೇಕಾನಂದರ ಬಗ್ಗೆ ಕೇಳಿದ್ದಿರಲ್ಲವೇ ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಅವರು, ಅವರ ತತ್ತ್ವಗಳನ್ನು ಅಳವಡಿಸಿ ಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತೆ ತಿಳಿಸಿದರು. ನಂತರ ಆಹಾರ ಶೇಖರಣೆ ಉಗ್ರಾಣಕ್ಕೆ ಭೇಟಿ ನೀಡಿ ಅಕ್ಕಿ ಹಾಗೂ ತರಕಾರಿಗಳ ಗುಣಮಟ್ಟ ಪರಿಶೀಲಿಸಿ ಹೆಚ್ಚು ದಿನ ಇಟ್ಟರೆ ಕೆಡುವ ತರಕಾರಿಗಳನ್ನು ಎರಡು ದಿನದಲ್ಲಿ ಬಳಸುವಂತೆ ಸೂಚಿಸಿದರು.

ಇಂದಾವರದ ನಗರಸಭೆ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರು, ಇದರಲ್ಲಿ ಉತ್ಪತ್ತಿ ಯಾಗುತ್ತಿರುವ ಕೊಳಚೆ ನೀರು ಗ್ರಾಮದ ಕಾಲುವೆಯಲ್ಲಿ ಹರಿಯುತ್ತಿರುವುದರಿಂದ ಕೆಟ್ಟ ವಾಸನೆ ಬರುತ್ತಿದೆ. ಜೊತೆಗೆ ಸೊಳ್ಳೆ, ನೊಣಗಳು ಹೆಚ್ಚಾಗಿರುವುದರಿಂದ ರೋಗರುಜಿನಗಳಿಗೆ ಆಹ್ವಾನ ನೀಡಿದಂತ್ತಾಗುತ್ತದೆ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ ಎಂದರು.

ಕಸ ವಿಲೇವಾರಿ ಘಟಕದಲ್ಲಿ ಬಹಳ ದೊಡ್ಡ ಸಮಸ್ಯೆ ಇದೆ, ಡ್ರೈ ವೇಸ್ಟ್ ಆಗಿ ಹೊರಬರುವ ಕಸ ಸ್ಥಳಾಂತರ ಮಾಡದೆ ಸುಮಾರು 25 ವರ್ಷಗಳಿಂದ ವಿಲೇವಾರಿ ಮಾಡದೇ, ಇಡೀ ಗುಡ್ಡ ಕಸವಾಗಿದೆ. ಇದರಿಂದ ಬರುವ ನೀರು ಕಲುಷಿತಗೊಂಡು ಕೃಷಿಗೆ, ತೋಟಗಾರಿಕೆಗೆ ಹಾಗೂ ದನಕರುಗಳಿಗೆ, ನಾಗರಿಕರಿಗೆ ತೊಂದರೆಯಾಗುತ್ತಿದೆ. ಪ್ರತಿ ತಿಂಗಳು ನಡೆಯುವ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಣ ಕಸ ವಿಲೇವಾರಿ ಮಾಡಲಾಗುತ್ತಿದೆ. ಆದರೆ ಈ ಕಾರ್ಯ ಅಂತಿಮ ಗೊಳ್ಳಲು ವರ್ಷಾನುಗಟ್ಟೆಲೆಯಾಗುತ್ತದೆ. ಈ ಸಂಬಂಧ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಂಜಿನಿಯರ್‌ನ್ನು ಆಹ್ವಾನಿಸಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಯಾವ ರೀತಿ ತೀರ್ಮಾನ ಮಾಡಬಹುದು ಎಂಬ ಬಗ್ಗೆ ಪ್ರಸ್ತಾವನೆ ಕಳಿಸುವುದಾಗಿ ತಿಳಿಸಿದರು.

ಒಣ ಕಸ ಸ್ಥಳಾಂತರ ಸಮಸ್ಯೆಯಿದ್ದು, ಬೇರೆಡೆಗೆ ವಿಲೇವಾರಿ ಮಾಡಿದರೆ ಅಲ್ಲಿಯೂ ಇದೇ ಸಮಸ್ಯೆ ಸೃಷ್ಠಿಯಾಗುವುದು ಎಂಬುದನ್ನು ಮನಗಂಡು ಪರಿಶೀಲನೆ ನಡೆಸಿದ ಸ್ಥಳದಲ್ಲಿಯೇ ಪರ್ಯಾಯ ವ್ಯವಸ್ಥೆ ಮಾಡಲು ನಿರ್ದೇಶನ ನೀಡಲಾಗಿದೆ ಎಂದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 2 ಬದಿ ಕಸ ವಿಲೇವಾರಿಗೆ ಕ್ರಮವಹಿಸಲಾಗಿದೆ. ಅದೇ ಮಾದರಿಯಲ್ಲಿ ಚಿಕ್ಕಮಗ ಳೂರಿನಲ್ಲಿಯೂ ನಿರ್ಮಾಣ ಮಾಡಿ ಕೊಳಚೆ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರನ್ನು ಹೊರತುಪಡಿಸಿ, ತೋಟ ಗಾರಿಕೆಗೆ, ಕೃಷಿಗೆ ಬಳಸಿಕೊಳ್ಳುವಂತೆ ಸೂಚಿಸಿದರು. ನಗರದ ಗ್ರಾಮೀಣ ಸಾರಿಗೆ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ಶೌಚಾಲಯ ಅಸ್ವಚ್ಚತೆ, ಕ್ಯಾಂಟೀನ್ ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿ, ಪ್ರತಿದಿನ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕೆಂದರು.

ಸುಮಾರು ₹19 ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಅಲ್ಲಿಯವರೆಗೆ ಒಂದು ಬೋರ್‌ವೆಲ್ ತೆಗೆಸಿ ನೀರಿನ ಸಮಸ್ಯೆ ಪರಿಹರಿಸಬೇಕು, ಬಸ್ ನಿಲ್ದಾಣದಲ್ಲಿ ನೀರು ನಿಲ್ಲದಂತೆ ಜಲ್ಲಿ ಹಾಕಿ ಎತ್ತರ ಮಾಡಿ ನೀರು ಒಂದೆಡೆ ಕಾಲುವೆಗೆ ಹರಿಯುವಂತೆ ಕ್ರಮವಹಿಸುವಂತೆ ಸೂಚಿಸಿದರು.

ಈಗ ಪ್ರಕರಣ ದಾಖಲಾದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಇತ್ಯರ್ಥಪಡಿಸಿ ವರದಿ ನೀಡಿದರೆ ಪ್ರಕರಣ ವಾಪಸ್ ಪಡೆಯುವುದಾಗಿ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಎಂ ಪಾಟೀಲ್, ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೀಕರ್, ಶಿವಾಜಿ ಅನಂತ್ ನಲ್ಪಾಡೆ, ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ, ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಹಾಜರಿದ್ದರು.24 ಕೆಸಿಕೆಎಂ 2ಚಿಕ್ಕಮಗಳೂರು ಸಮೀಪದ ಇಂದಾವರದಲ್ಲಿರುವ ನಗರಸಭೆಯ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು ಭೇಟಿ ನೀಡಿ ಪರಿಶೀಲಿಸಿದರು.

PREV

Recommended Stories

ಉಡುಪಿ-ಉಚ್ಚಿಲ ದಸರಾ: ನಿತ್ಯ ಸಾವಿರಾರು ಮಹಿಳೆಯರಿಂದ ಕುಂಕುಮಾರ್ಚನೆ
ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಭವನ ಉದ್ಘಾಟನೆ