ಕನ್ನಡಪ್ರಭ ವಾರ್ತೆ ಹಲಗೂರು
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಗರ ಪ್ರದೇಶದ ಖಾಸಗಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಪುಸ್ತಕವೇ ಅವರ ಪ್ರಪಂಚವಾಗಿರುತ್ತದೆ. ಆದರೆ, ಹಳ್ಳಿಗಾಡಿನಲ್ಲಿ ಓದಿದ ಮಕ್ಕಳಿಗೆ ಕಷ್ಟ ಸುಖಗಳ ಅರಿವಿನ ಜೊತೆಗೆ ಜಾಣತನ ಹೆಚ್ಚಿರುತ್ತದೆ. ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಹೆಚ್ಚು ಉನ್ನತ ಸರ್ಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಅರಿವು ನಿಮಗಿರಲಿ ಎಂದರು.ಹಳ್ಳಿಗಾಡಿನ ಮಕ್ಕಳೇ ನಿಮ್ಮ ಭವಿಷ್ಯವನ್ನು ನೀವೇ ರೂಪಿಸಿಕೊಳ್ಳಬೇಕು. ಪ್ರಯತ್ನ ಸಫಲವಾಗದಿದ್ದಾಗ ಮಾತ್ರ ತಂದೆ ತಾಯಿ ಮಾಡಿರುವ ಆಸ್ತಿ, ವ್ಯವಸಾಯ, ವ್ಯಾಪಾರ ನಿಮ್ಮ ಕೊನೆ ಆಯ್ಕೆಯಾಗಬೇಕು. ಯಾವಾಗ ಸಮಾಜದ ಜೊತೆ ಒಡನಾಟ ಬೆಳೆಸಿಕೊಂಡು ಧೈರ್ಯವಾಗಿ ಮಾತನಾಡಲು ಕಲಿತಾಗ ನಿಮ್ಮ ಜೀವನಕ್ಕೆ ಒಂದು ರೂಪ ಬರುತ್ತದೆ ಎಂದರು.
ಅನುದಾನ ನೀಡಿ ಕಂಪ್ಯೂಟರ್ ಶಿಕ್ಷಣ ಸಿಗುವಂತೆ ಮಾಡಿದ್ದಾರೆ. ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.
ಕ್ರೀಡಾ ವಿಭಾಗದ ಸಂಚಾಲಕ ಡಾ.ಟಿ.ಶ್ರೀನಿವಾಸ್, ಕಾಲೇಜು ಪ್ರಾಂಶುಪಾಲ ಆಲಂಗೂರು ಮಂಜುನಾಥ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ.ಶಂಕರೇಗೌಡ, ಸುಧಾಬಿದರಿ, ಸೀಮಾ ಕೌಸರ್, ತಾರಾ ಜಯಲಕ್ಷ್ಮಿ, ಗುರುಪ್ರಸಾದ್, ಕುಮಾರಸ್ವಾಮಿ ಸೇರಿದಂತೆ ಕಾಲೇಜಿನ ಇತರ ಉಪನ್ಯಾಸಕರು ಉಪನ್ಯಾಸಕಿಯರು ಇದ್ದರು.