ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ತಾಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಮಡಿಲು ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್.ಸಿ.ಎಸ್.ಪಿ. ಮತ್ತು ಟಿಎಸ್.ಪಿ. ಯೋಜನೆಯಡಿ ಬಾಲ ಮತ್ತು ಕಿಶೋರಿ ಕಾರ್ಮಿಕರ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಒಂದು ಶಿಕ್ಷಾರ್ಹ ಅಪರಾಧವಾಗಿದ್ದು, ಇದನ್ನು ನೆರವೇರಿಸುವರು ಮತ್ತು ಪ್ರೋತ್ಸಾಹಿಸುವವರು ಅಪರಾಧಿಗಳಾಗಿದ್ದು, ಶಾರೀರಿಕ, ಮಾನಸಿಕವಾಗಿ ಬೆಳವಣಿಗೆಯಾಗದ ಯುವತಿಯರನ್ನು 18 ವರ್ಷದೊಳಗೆ ಮದುವೆ ಮಾಡುವುದರಿಂದ ರಕ್ತ ಹೀನತೆ, ಶಿಶುಮರಣ, ವಿಕಲಚೇತನ ಮಕ್ಕಳು, ವಯಸ್ಸಿಗೆ ಮೀರಿದ ಜವಾಬ್ದಾರಿ, ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ತಾಯಿ ಅಕಾಲಿಕ ಮರಣಕ್ಕೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ ಎಂದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಂಕರ್ ಮೂರ್ತಿ ಮಾತನಾಡಿ, ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ನಾವೆಲ್ಲರೂ ಕೆಲಸ ಮಾಡುವುದು ನಮ್ಮ ಸಮಾಜಕ್ಕಾಗಿ. ಇದನ್ನು ಅರಿತು ಉತ್ತಮ ಸಮಾಜ ಕಟ್ಟಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕೆಂದರು.
ಬಳಿಕ ಇದೇ ಬಾಲ ಕಾರ್ಮಿಕ ಮತ್ತು ಕಿಶೋರಿ ಕಾರ್ಮಿಕರ ಪದ್ದತಿಯ ಬಗ್ಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು ಮೂನ್ನೂರು ಹೆಚ್ಚು ಬಾಲಕಿಯರು ಭಾಗವಹಿಸಿದ್ದರು.
ತಾಲೂಕು ಕಾರ್ಮಿಕ ನಿರೀಕ್ಷಕ ಗೋವಿಂದರಾಜು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್, ಮಡಿಲು ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಶ್ರೀನಿವಾಸ್, ಹಿರಿಯ ಉಪನ್ಯಾಸಕರ ಕುಮಾರ್, ಕಾರ್ಮಿಕ ಇಲಾಖೆಯ ಡಿಇಓ ಚಂದ್ರಕಾಂತ್, ಕ್ಷೇತ್ರ ಸಂಯೋಜಕ ರಾಮಚಂದ್ರು ಇದ್ದರು.