ಕನ್ನಡಪ್ರಭ ವಾರ್ತೆ ಗುಡಿಬಂಡೆ
ಪಟ್ಟಣದ ಮುಖ್ಯ ರಸ್ತೆಯನ್ನು ಬಂದ್ ಮಾಡುವ ಮೂಲಕ ಹಾಗೂ ಕಾಂಗ್ರೆಸ್ ನಾಯಕರು, ಸಿಎಂ, ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಸ್ಥಳೀಯ ಮುಖಂಡರು ಹೊರಹಾಕಿದರು.
ಇದೇ ಸಮಯದಲ್ಲಿ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಮುಖಂಡ ಅಂಬರೀಶ್ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ತಡೆದ ಘಟನೆ ಸಹ ನಡೆಯಿತು.ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿರೆಡ್ಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಶ್ರಮಿಸಿದ ಶಾಸಕ ಸುಬ್ಬಾರೆಡ್ಡಿಯವರಿಗೆ ಇಂದು ಹೈಕಮಾಂಡ್ ಸಚಿವ ಸ್ಥಾನ ಕೊಟ್ಟಿಲ್ಲ. ಇದರಿಂದಾಗಿ ನಮಗೆ ತುಂಬಾನೆ ಬೇಸರವಾಗಿದೆ. ಸತತವಾಗಿ ಮೂರು ಬಾರಿ ಗೆಲ್ಲುವ ಮೂಲಕ ಬೇರೆ ಪಕ್ಷಗಳಿಗೆ ನಡುಕ ಹುಟ್ಟಿಸಿದ್ದಾರೆ. ಅಂತಹ ನಿಷ್ಠಾವಂತ ಶಾಸಕರಿಗೆ ಇಂದು ಸಚಿವ ಸ್ಥಾನ ನೀಡದೇ ಇರುವುದು ಸರಿಯಲ್ಲ. ಶಾಸಕ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕರೆಯಲಾಗಿದ್ದ ಬಂದ್ ಗೆ ಗುಡಿಬಂಡೆಯಾದ್ಯಂತ ಉತ್ತಮ ಬೆಂಬಲ ದೊರೆಯಿತು. ಬಂದ್ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಪ್ರತಿಭಟನೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗುಡಿಬಂಡೆ ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದರು. ಈ ವೇಳೆ ಕಾಂಗ್ರೇಸ್ ಮುಖಂಡರಾದ ರಘುನಾಥರೆಡ್ಡಿ, ಕೃಷ್ಣೇಗೌಡ, ಎಚ್.ಪಿ.ಲಕ್ಷ್ಮೀನಾರಾಯಣ, ನವೀನ್ ರಾಜ್, ವಿಕಾಸ್, ರಮೇಶ್, ಅಂಬರೀಶ್, ಬಾಲಕೃಷ್ಣಾರೆಡ್ಡಿ, ಲಕ್ಷ್ಮೀನಾರಾಯಣ, ನರೇಂದ್ರ, ಬಾಬು, ರಿಯಾಜ್, ರಮಣ, ಸುಬ್ಬರಾಯಪ್ಪ, ಆದಿನಾರಾಯಣಪ್ಪ, ರಾಜಾರೆಡ್ಡಿ, ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು.