ದ್ವೈವಾರ್ಷಿಕ ವಿಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : May 09, 2024, 01:05 AM IST
ಕ್ಯಾಪ್ಷನಃ8ಕೆಡಿವಿಜಿ32ಃಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ | Kannada Prabha

ಸಾರಾಂಶ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಮೇ 9ರಿಂದ ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

- ಜಿಲ್ಲೆಯಲ್ಲಿ 2 ಶಿಕ್ಷಕರ ಕ್ಷೇತ್ರ, 1 ಪದವೀಧರ ಕ್ಷೇತ್ರ - - - - - -

- ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿ

- ಮೇ 16 ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ

- ಮೇ 17ರಂದು ನಾಮಪತ್ರಗಳ ಪರಿಶೀಲನೆ

- ಮೇ 20ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆ ದಿನ

- ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ

- ಜೂನ್ 6ರಂದು ಮತ ಎಣಿಕೆ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಮೇ 9ರಿಂದ ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಜೂನ್ 21ರಂದು ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯ ಆಗುವುದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಮೇ 16 ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ವಿಧಾನ ಪರಿಷತ್ತು ಚುನಾವಣಾ ವೇಳಾಪಟ್ಟಿ ಪ್ರಕಟ ಆಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ.

3 ವಿಪ ಸದಸ್ಯರ ಆಯ್ಕೆಗೆ ಚುನಾವಣೆ:

ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳು ಸೇರಲಿವೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ:

ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಈ ಕ್ಷೇತ್ರದಲ್ಲಿ ಬರಲಿವೆ.

ಆಯಾ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿ ಆಗಿರುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- - - -8ಕೆಡಿವಿಜಿ32ಃ: ಡಾ. ಎಂ.ವಿ.ವೆಂಕಟೇಶ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!