ಬೇಡಿಕೆ ಪಟ್ಟಿ ಸಲ್ಲಿಸಿ ನರೇಗಾ ಸೌಲಭ್ಯ ಪಡೆಯಿರಿ

KannadaprabhaNewsNetwork |  
Published : Nov 20, 2025, 01:00 AM IST
ಪೋಟೊ19ಕೆಎಸಟಿ3: ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದ ವಾರ್ಡ ಸಭೆಯಲ್ಲಿ ಪಿಡಿಒ ಕೆ ವಾಗೀಶ ಮಾತನಾಡಿದರು. | Kannada Prabha

ಸಾರಾಂಶ

ರೈತರು ಅವಶ್ಯವಿರುವ ಕುರಿ ಶೆಡ್, ಮೇಕೆ, ದನದ ಶೆಡ್, ಸೇರಿದಂತೆ ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬೇಕು

ಕುಷ್ಟಗಿ: ತಾಲೂಕಿನ ಕೇಸೂರು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಕೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೇಸೂರು ಗ್ರಾಮದ 1ನೇ ವಾರ್ಡಿನ ವಾರ್ಡ್ ಸಭೆ ನಡೆಯಿತು.

ಸಭೆಯಲ್ಲಿ ಬಸಯ್ಯ ಮಾತನಾಡಿ, ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ, ತೋಟಗಾರಿಕೆ, ಕೃಷಿ ಇಲಾಖೆ, ಅರಣ್ಯ, ರೇಷ್ಮೆ ಇಲಾಖೆಗಳಿಂದ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶಗಳಿದ್ದು ರೈತರು ಅವಶ್ಯವಿರುವ ಕುರಿ ಶೆಡ್, ಮೇಕೆ, ದನದ ಶೆಡ್, ಸೇರಿದಂತೆ ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬೇಕು. ನರೇಗಾ ಯೋಜನೆಯ ಸದುಪಯೋಗಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಕೇಸೂರು ಪಿಡಿಒ ಕೆ. ವಾಗೀಶ ನರೇಗಾ ಯೋಜನೆ ಕುರಿತು ಮಾಹಿತಿ ನೀಡಿದರು. ಗ್ರಾಪಂ ಸದಸ್ಯ ಶುಕಮುನಿ ಈಳಗೇರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಉಮೇಶ ಮಡಿವಾಳರ, ಶಾರದಾ ಜಲಕಮಲದಿನ್ನಿ, ವೀರಯ್ಯ ಮಳಿಮಠ, ಶಾಮಿದ್ ಮುಜಾವರ, ಯಂಕಪ್ಪ ದಾಸರ, ಈರನಗೌಡ ಟೆಂಗುಂಟಿ, ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸ್ವಸಹಾಯ ಸಂಘದವರು, ಗ್ರಾಮಸ್ಥರು ಗ್ರಾಪಂ ಸಿಬ್ಬಂದಿಗಳು ಇದ್ದರು.

ನಾಯಿಗಳ ಹಾವಳಿ ನಿಯಂತ್ರಿಸಿ: ಕೇಸೂರು ಗ್ರಾಮದ ನಿವಾಸಿ ವಿಷ್ಣು ಅಂಗಡಿ ಮಾತನಾಡಿ, ನಮ್ಮ ಗ್ರಾಮದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಗ್ರಾಪಂಗೆ ಮನವಿ ಸಲ್ಲಿಸಿ ತಿಂಗಳಾಗುತ್ತ ಬಂದರೂ ಸ್ಥಳೀಯ ಆಡಳಿತ ನಿಯಂತ್ರಣಕ್ಕೆ ಮುಂದಾಗಿಲ್ಲ. ಈ ನಾಯಿಗಳು ಚಿಕ್ಕಮಕ್ಕಳಿಗೆ ಕಚ್ಚುವ ಸಾಧ್ಯತೆ ಇದ್ದು, ಕೂಡಲೇ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ