-ಸ್ಮಾಲ್
---
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ------
ಮುಖ್ಯಮಂತ್ರಿ ಸೂಚನೆಯಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಯುತ್ತಿದ್ದು, ಅದರ ಭಾಗವಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಇತ್ತೀಚೆಗೆ ಮಳೆಯಾಗಿದ್ದರೂ, ಮಧ್ಯಂತರ ಒಣಹವೆಯಿಂದ ಉದ್ದು ಹಾಗೂ ಹೆಸರು ಸೇರಿದಂತೆ ಹಲವು ಬೆಳೆಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ಬೆಳೆ ಹಾನಿ (ಮಿಡ್ ಸೀಸನ್ ಅಡ್ವರ್ಸಿಟಿ) ಘೋಷಿಸಲಾಗಿದ್ದು, ರೈತರಿಗೆ ಪರಿಹಾರ ದೊರೆಯುವಂತೆ ಅಗತ್ಯ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸುಮಾರು 70 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಅರ್ಹ ರೈತರಿಗೆ ಶೀಘ್ರ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚೆ ನಡೆಸಿದ್ದು, ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಎಲ್ಲಾ ಔಷಧ ಮತ್ತು ರಾಸಾಯನಿಕ ಕಾರ್ಖಾನೆಗಳಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಕಾರ್ಮಿಕರ ಸುರಕ್ಷತಾ ಕ್ರಮಗಳ ಅನುಷ್ಠಾನವನ್ನು ತಜ್ಞರ ತಂಡದಿಂದ ಪರಿಶೀಲಿಸಲಾಗುವುದು ಎಂದು ಹೇಳಿದರು.
* ಅಸಮಾಧಾನ ಸಹಜ: ಸಚಿವ ಸಂಪುಟ ವಿಸ್ತರಣೆ ಹಾಗೂ ಕಾಂಗ್ರೆಸ್ ಪಕ್ಷದ ಕೆಲ ಶಾಸಕರ ಅಸಮಾಧಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಕಾಂಗ್ರೆಸ್ ಒಂದು ಕುಟುಂಬದಂತಿರುವ ಪಕ್ಷ. ಹಿರಿಯ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುವುದು ಸಹಜ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಎಲ್ಲರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ " ಎಂದು ಹೇಳಿದರು.
5ವೈಡಿಆರ್19 : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.