ಅಧಿಕಾರಿಗಳಿಗೆ ಸೂಚನೆ । ಟ್ಯಾಂಕರ್ ಮೂಲ ನೀರು ಸರಬರಾಜು । ಬರ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಜಿಲ್ಲೆಯ ಎಲ್ಲಾ ತಾಲೂಕು ಬರಪೀಡಿತ ಎಂದು ಘೋಷಣೆಯಾಗಿವೆ. ಆಯಾ ತಾಲೂಕು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಮುನ್ನ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮೂಲಕ ನೀರು ದೊರಕುವುದಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಟ್ಯಾಂಕರ್ ಮೂಲಕ ನೀರು ಪಡೆಯಲು ಟೆಂಡರ್ ಕರೆದು ನಿಗದಿ ಪಡಿಸಿದ ದರಕ್ಕೆ ಪಡೆಯಬೇಕು ಎಂದರು.ಟ್ಯಾಂಕರ್ ಆ್ಯಪ್ ಮೂಲಕ ಅದರ ವಿವರ ಅಪ್ಲೋಡ್ ಮಾಡಿ ನಂತರ ಸರಬರಾಜು ಮಾಡಬೇಕು. ಬರ ನಿರ್ವಹಣೆಗಾಗಿ ಎಲ್ಲಾ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಅಧಿಕಾರಿಗಳು ತಪ್ಪದೇ ವಾರಕೊಮ್ಮೆ ತಾಲೂಕಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಹೇಳಿದರು.
ಕೆ.ಆರ್. ಪೇಟೆಯಲ್ಲಿ ಕೂಟಗಳ್ಳಿ ಟ್ಯಾಂಕರ್ ಮೂಲಕ ಕುಡಿಯುವ ನೀರು ನೀಡಲಾಗುತ್ತಿದೆ. ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಂಬಂಧಿಸಿದ ತಹಸೀಲ್ದಾರ್ಗಳು ಸಭೆಗೆ ಮಾಹಿತಿ ನೀಡಿದರು.
ನೀರಾವರಿ ಹಾಗೂ ಫೆನ್ಸಿಂಗ್ ಇರುವ ತೋಟಗಾರಿಕೆ ಇಲಾಖೆ ಅಧೀನದಲ್ಲಿರುವ ಎರಡು ಎಕರೆ ಭೂಮಿಯನ್ನು ತಾಲೂಕುವಾರು ಗುರುತಿಸಿ ಮೇವಿನ ಬೆಳೆ ಬೆಳೆಯಲು ಸಹ ಯೋಜನೆಯಲ್ಲಿ ಸೇರಿಸಲಾಗಿದೆ. ಬರ ಹಾಗೂ ಬೇಸಿಗೆಯಲ್ಲಿ ಸಾಮಾನ್ಯವಾಗಿ ಬೇಕಿರುವ ಔಷಧಿಗಳು, ಫ್ಲೂಯಿಡ್ಗಳು ಸೇರಿದಂತೆ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೆಕು ಎಂದು ಹೇಳಿದರು.
- - -
ಬರ ನೀಗಿಸಲು 750 ಟನ್
ಜಿಲ್ಲೆಯಲ್ಲಿ ವಿ.ಸಿ. ಫಾರರ್ಮ್ನಲ್ಲಿ ಅಧೀನದಲ್ಲಿರುವ 15 ಎಕರೆಯನ್ನು ಒಪ್ಪಂದ ಮಾಡಿಕೊಂಡು ಮೇವು ಬೆಳೆಯಲು ಯೋಜನೆ ಸಿದ್ಧಪಡಿಸಿದ್ದು, ಅನುಮೋದನೆ ಕೋರಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರ ಒಪ್ಪಿಗೆ ನೀಡಿದರೆ ವಿ.ಸಿ. ಫಾರ್ಮ್ ವಿಜ್ಞಾನಿಗಳ ಸಹಕಾರ ಪಡೆದು ಇಲ್ಲಿ 750 ಟನ್ ಮೇವು ಬೆಳೆಯಬಹುದು ಎಂದು ಅಂದಾಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.5ಕೆಎಂಎನ್ ಡಿ18