ಸಹಾಯಧನ: ರೈತರಿಂದ ಅರ್ಜಿ ಆಹ್ವಾನ

KannadaprabhaNewsNetwork |  
Published : Sep 14, 2024, 01:48 AM IST

ಸಾರಾಂಶ

Subsidy: Applications invited from farmers

ಯಾದಗಿರಿ: 2024-25ನೇ ಸಾಲಿನ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ (ಜಿ.ಪಂ) ಶಿವಕುಮಾರ್‌ ತಿಳಿಸಿದ್ದಾರೆ. ಬಾಳೆ, ದಾಳಿಂಬೆ, ಮಾವು, ಸೀಬೆ, ಡ್ರಾಗನ್ ಫ್ರೂಟ್, ದ್ರಾಕ್ಷಿ ಮತ್ತು ಹೂವು ಹಾಗೂ ಹೈಬ್ರೀಡ್ ತರಕಾರಿಗೆ ಸಹಾಯಧನ ನೀಡಲಾಗುವುದು. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತಿ ಹೊಂದಿರಬೇಕು. ತಮಗೆ ಬೇಕಾಗುವ ಘಟಕಗಳಿಗೆ ಸಹಾಯಧನ ಪಡೆಯಲು ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ), ಯಾದಗಿರಿ, ಶಹಾಪುರ, ಸುರಪುರ ಕಚೇರಿಗಳಿಗೆ ಸೆ. 22ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಪಂ)ರನ್ನು ಮೊ: 9164570011, ಶಹಾಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಪಂ)ರನ್ನು ಮೊ: 8217490621, ಸುರಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಪಂ)ರನ್ನು ಮೊ: 8217748605 ಮೂಲಕ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ
ಸರ್ಕಾರಿ ಕಾಮಗಾರಿಗೆ ಅನುಮತಿಸಲು ಲಂಚ ಸ್ವೀಕಾರ- ಶಾಸಕ ಲೋಕಾ ಬಲೆಗೆ!